‘ಬಿಜೆಪಿ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ’ ಎಂಬ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಹೇಳಿಕೆಗೆ ಬುಧವಾರ ಇಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿ, ’ಹಾವಿನ ಬುಟ್ಟಿ ಇಟ್ಟುಕೊಂಡು ಹಾವು ಬಿಡ್ತೇನೆ, ಬಿಡ್ತೇನೆ ಎಂದು ಹೇಳುತ್ತಾ ಇರುತ್ತಾರೆ. ಹಾವಿನ ಬುಟ್ಟಿ ತೆರೆದರೆ ತಾನೇ ಗೊತ್ತಾಗೋದು, ಅದು ಬುಸ್ ಅನ್ನುತ್ತಾ ಅಥವಾ ಠುಸ್ ಅನ್ನುತ್ತಾ ಅಂತ’ ಎಂದು ಲೇವಡಿ ಮಾಡಿದರು.