ಈ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ವೀರೇಂದ್ರ ಪಾಟೀಲ್ ಅವರನ್ನು ಅತ್ಯಂತ ಅವಮಾನಕರ ರೀತಿಯಲ್ಲಿ ಮುಖ್ಯಮಂತ್ರಿ ಸ್ಥಾನದಿಂದ ಕಾಂಗ್ರೆಸ್ ಪದಚ್ಯುತಿಗೊಳಿಸಿತ್ತು. ವೀರಶೈವ–ಲಿಂಗಾಯತ ಸಮುದಾಯಕ್ಕೆ ಕಾಂಗ್ರೆಸ್ ನಾಯಕರು ಮಾಡಿದ ಅತಿದೊಡ್ಡ ಅವಮಾನ ಇದಾಗಿತ್ತು. ಈಗ ಎರಡನೇ ಹಂತದಲ್ಲಿ ಬೆಳೆಯುತ್ತಿರುವ ರಾಜಕೀಯ ಕುಡಿಗಳಿಗೂ ಕಾಂಗ್ರೆಸ್ ಪಕ್ಷ ಅನ್ಯಾಯವೆಸಗುತ್ತಿದೆ’ ಎಂದು ವಾಗ್ದಾಳಿ ನಡೆಸಿದೆ.