ನಗರದ ಕಿದಿಯೂರು ಹೋಟೆಲ್ ಸಭಾಂಗಣದಲ್ಲಿ ಸೋಮವಾರ ಕೋಟಿ ಚೆನ್ನಯ್ಯ ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿ, ‘ಸೇನಾ ಪೂರ್ವ ತರಬೇತಿ ಶಾಲೆಗಗಳಿಗೆ ಸ್ವಾತಂತ್ರ್ಯ ಹೋರಾಟಗಾರರ ಹೆಸರು ಇಡಲಾಗುವುದು. ಮುಂದೆ ಹಿಂದುಳಿದ ವರ್ಗಗಳ ಹಾಗೂ ಸಮಾಜ ಕಲ್ಯಾಣ ಇಲಾಖೆಯಲ್ಲಿರುವ ದೈಹಿಕ ಶಿಕ್ಷಕರ ನೇಮಕಾತಿಯಲ್ಲಿ ಅಗ್ನಿವೀರರಿಗೆ ಶೇ 50 ಹುದ್ದೆಗಳನ್ನು ಮೀಸಲಿಡುವ ಚಿಂತನೆ ಇದೆ ಎಂದರು.