ಬಾಗಲಕೋಟೆ: ಪಿಎಸ್ಐ ಅಕ್ರಮ ನೇಮಕಾತಿಗೆ ಸಂಬಂಧಿಸಿದಂತೆ ಧಾರವಾಡದ ಕೋಚಿಂಗ್ ಸೆಂಟರ್ವೊಂದರ ಮಾಜಿ ನಿರ್ದೇಶಕ ಶ್ರೀಕಾಂತ ದುಂಡಪ್ಪ ಚೌರಿ ಅವರನ್ನು ಸಿಐಡಿ ಅಧಿಕಾರಿಗಳು ಬುಧವಾರ ವಶಕ್ಕೆ ಪಡೆದು ಬೆಂಗಳೂರಿಗೆ ವಿಚಾರಣೆಗೆ ಕರೆದೊಯ್ದಿದ್ದಾರೆ. ಶ್ರೀಕಾಂತ ಅವರನ್ನು ರಬಕವಿ–ಬನಹಟ್ಟಿ ತಾಲ್ಲೂಕಿನ ಯರಗಟ್ಟಿಯ ಯಲ್ಲಮ್ಮನ ಗುಡಿಯ ಬಳಿ ವಶಕ್ಕೆ ಪಡೆಯಲಾಗಿದೆ.