‘ಬೆಳೆ ನಾಶ ಸಮೀಕ್ಷೆ, ಅಧ್ಯಯನದ ಬಳಿಕ ಪರಿಹಾರ ನೀಡುವುದಾಗಿ ಹೇಳಿಕೊಂಡು ಸರ್ಕಾರ ಕಾಲಹರಣ ಮಾಡಬಾರದು. ತಹಶೀಲ್ದಾರ್ಗಳ ಮೂಲಕ ರೈತರಿಂದ ತಕ್ಷಣ ಅರ್ಜಿ ಆಹ್ವಾನಿಸಿ, ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಿ, ವಿಡಿಯೊ, ಭಾವಚಿತ್ರ ತೆಗೆಸಿ, 30 ದಿನಗಳ ಒಳಗೆ ಪರಿಹಾರ ನೀಡಬೇಕು’ ಎಂದು ಅವರು ಆಗ್ರಹಿಸಿದರು. ಅಲ್ಲದೆ, ಅರ್ಜಿ ಸಲ್ಲಿಸುವ ರೈತರಿಗೆ ನೆರವಾಗುವಂತೆ ಕಾಂಗ್ರೆಸ್ ಕಾರ್ಯಕರ್ತರಲ್ಲೂ ಮನವಿ ಮಾಡಿದರು.