ಹುಬ್ಬಳ್ಳಿ:ಧಾರವಾಡ– ಹುಬ್ಬಳ್ಳಿ, ಗದಗ, ಹಾವೇರಿ, ವಿಜಯನಗರ, ಬೆಳಗಾವಿ, ಉತ್ತರ ಕನ್ನಡ, ಬಾಗಲ ಕೋಟೆ, ವಿಜಯಪುರ ಜಿಲ್ಲೆಗಳ ವಿವಿಧೆಡೆ ಬುಧವಾರ ತಡರಾತ್ರಿ ಹಾಗೂ ಗುರುವಾರ ನಿರಂತರವಾಗಿ ಮಳೆಯಾಗಿದೆ.
ಮಳೆಯಿಂದ ವಿಜಯನಗರ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳು ಚುರುಕುಗೊಂಡಿವೆ. ಜಿಲ್ಲೆಯಾದ್ಯಂತ ಬುಧವಾರ ರಾತ್ರಿಯಿಡೀ ಸುರಿದ ಬಿರುಸಿನ ಮಳೆಗೆ 23 ಮನೆಗಳಿಗೆ ಹಾನಿಯಾಗಿದೆ. ಅಂದಾಜು 250 ಎಕರೆ ಭತ್ತ ನಾಶವಾಗಿವೆ.ಅರಸೀಕೆರೆ ಹೋಬಳಿಯ ಸುತ್ತಮುತ್ತಲ ಚೆಕ್ ಡ್ಯಾಂಗಳು ತುಂಬಿದ್ದು ಮಳೆಯಲ್ಲಿಯೇ ಗ್ರಾಮಸ್ಥರು ಮೀನು ಹಿಡಿಯುತ್ತಿದ್ದ ದೃಶ್ಯ ಕಂಡುಬಂತು.
ಧಾರವಾಡ ಜಿಲ್ಲೆ ಕುಂದಗೋಳ ತಾಲ್ಲೂಕಿನಲ್ಲಿ 45 ಮನೆಗಳಿಗೆ, ಹಾವೇರಿ ಜಿಲ್ಲೆಯಲ್ಲಿ 35 ಮನೆಗಳಿಗೆ ಹಾನಿಯಾಗಿವೆ.