ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳೆ ಜೋರು: ಕೃಷಿ ಚಟುವಟಿಕೆ ಚುರುಕು

ಹಾವೇರಿಯ 35, ವಿಜಯನಗರದ 23 ಮನೆಗಳಿಗೆ ಹಾನಿ
Last Updated 19 ಮೇ 2022, 19:26 IST
ಅಕ್ಷರ ಗಾತ್ರ

ಹುಬ್ಬಳ್ಳಿ:ಧಾರವಾಡ– ಹುಬ್ಬಳ್ಳಿ, ಗದಗ, ಹಾವೇರಿ, ವಿಜಯನಗರ, ಬೆಳಗಾವಿ, ಉತ್ತರ ಕನ್ನಡ, ಬಾಗಲ
ಕೋಟೆ, ವಿಜಯಪುರ ಜಿಲ್ಲೆಗಳ ವಿವಿಧೆಡೆ ಬುಧವಾರ ತಡರಾತ್ರಿ ಹಾಗೂ ಗುರುವಾರ ನಿರಂತರವಾಗಿ ಮಳೆಯಾಗಿದೆ.

ಮಳೆಯಿಂದ ವಿಜಯನಗರ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳು ಚುರುಕುಗೊಂಡಿವೆ. ಜಿಲ್ಲೆಯಾದ್ಯಂತ ಬುಧವಾರ ರಾತ್ರಿಯಿಡೀ ಸುರಿದ ಬಿರುಸಿನ ಮಳೆಗೆ 23 ಮನೆಗಳಿಗೆ ಹಾನಿಯಾಗಿದೆ. ಅಂದಾಜು 250 ಎಕರೆ ಭತ್ತ ನಾಶವಾಗಿವೆ.ಅರಸೀಕೆರೆ ಹೋಬಳಿಯ ಸುತ್ತಮುತ್ತಲ ಚೆಕ್ ಡ್ಯಾಂಗಳು ತುಂಬಿದ್ದು ಮಳೆಯಲ್ಲಿಯೇ ಗ್ರಾಮಸ್ಥರು ಮೀನು ಹಿಡಿಯುತ್ತಿದ್ದ ದೃಶ್ಯ ಕಂಡುಬಂತು.

ಧಾರವಾಡ ಜಿಲ್ಲೆ ಕುಂದಗೋಳ ತಾಲ್ಲೂಕಿನಲ್ಲಿ 45 ಮನೆಗಳಿಗೆ, ಹಾವೇರಿ ಜಿಲ್ಲೆಯಲ್ಲಿ 35 ಮನೆಗಳಿಗೆ ಹಾನಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT