<p><strong>ಬೆಂಗಳೂರು:</strong> ಇತ್ತೀಚಿನ ಮಳೆಯಿಂದ ಹಾನಿಗೊಳಗಾಗಿರುವ ಮನೆಗಳಿಗೆ ಪರಿಹಾರ ನೀಡುವ ಸಂಬಂಧ ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ.</p>.<p>ಅಲ್ಲದೇ, ಈವರೆಗೆ ಆಗಿರುವ ಬೆಳೆ ಹಾನಿಯ ಬಗ್ಗೆ ಇದೇ 30 ರೊಳಗೆ ಜಂಟಿ ಸಮೀಕ್ಷೆ ನಡೆಸಿ ಆಯಾ ದಿನವೇ ತಂತ್ರಾಂಶದಲ್ಲಿ ನಮೂದಿಸುವಂತೆಯೂ ಕಂದಾಯ ಇಲಾಖೆ ಸೂಚಿಸಿದೆ.</p>.<p>ಪ್ರವಾಹದಿಂದ ಆಗಿರುವ ಬೆಳೆ ಹಾನಿ ವಿವರಗಳನ್ನು ಜಂಟಿ ಸಮೀಕ್ಷೆ ನಡೆಸಿ ಪ್ರತಿನಿತ್ಯ ಪರಿಹಾರ ತಂತ್ರಾಂಶದಲ್ಲಿ ನಮೂದಿಸಬೇಕು. ಇದರ ಅನ್ವಯ ಪ್ರತಿ ದಿನ ಇನ್ಪುಟ್ ಸಬ್ಸಿಡಿಯನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಲಾಗುವುದು ಎಂದು ತಿಳಿಸಿದೆ.</p>.<p>ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ಪ್ರವಾಹ ನೀರು ನುಗ್ಗಿರುವ ಮನೆಗಳ ಗೃಹೋಪಯೋಗಿ ವಸ್ತುಗಳು ಮತ್ತು ಬಟ್ಟೆಗಳನ್ನು ಕಳೆದುಕೊಂಡ ಕುಟುಂಬಗಳಿಗೆ ತಲಾ ₹10 ಸಾವಿರದಂತೆ ಜಿಲ್ಲಾಧಿಕಾರಿಗಳು ವೈಯಕ್ತಿಕ ಖಾತೆಯಲ್ಲಿ ಲಭ್ಯವಿರುವ ಅನುದಾನದಿಂದ ಕೂಡಲೇ ಪಾವತಿ ಮಾಡಬೇಕು ಎಂದು<br />ಹೇಳಿದೆ.</p>.<p>ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಪರಿಸ್ಥಿತಿ ಅವಲೋಕಿಸಿ ಎಸ್ಡಿಆರ್ಎಫ್ ಮತ್ತು ಎನ್ಡಿ ಆರ್ಎಫ್ ಮಾರ್ಗಸೂಚಿಯಂತೆ ಹಾನಿ ವಿವರಗಳನ್ನು ನಮೂದಿಸಲು ಸಂಪೂರ್ಣ ಅಧಿಕಾರ ನೀಡಲಾಗಿದೆ ಎಂದು ಮಾರ್ಗಸೂಚಿ ತಿಳಿಸಿದೆ.<br /></p>.<p><strong>ಅತಿವೃಷ್ಟಿ ಪರಿಹಾರ (</strong>ವಿವರ;ಪರಿಹಾರ ಮೊತ್ತ)</p>.<p>ನೀರು ನುಗ್ಗಿ ಗೃಹೋಪಯೋಗಿ ವಸ್ತುಗಳ ಹಾನಿ;₹10,000<br />ಶೇ 75 ಕ್ಕಿಂತ ಹೆಚ್ಚು ಹಾನಿಯಾದ ಮನೆ(‘ಎ’ ವರ್ಗ);₹5 ಲಕ್ಷ<br />ಶೇ25 ರಿಂದ ಶೇ 75ರಷ್ಟು ಮನೆ ಹಾನಿ(‘ಬಿ’ ವರ್ಗ);₹3 ಲಕ್ಷ<br />ಶೇ15ರಿಂದ ಶೇ 25 ಭಾಗಶಃ ಮನೆ ಹಾನಿ(‘ಸಿ’ ವರ್ಗ)₹50 ಸಾವಿರ<br />(2021–22 ನೇ ಸಾಲಿನಲ್ಲಿ ಪ್ರವಾಹ/ ಅತಿವೃಷ್ಟಿಯಿಂದ ಉಂಟಾದ ಮನೆಗಳ ಹಾನಿಗೆ ಪರಿಹಾರ ದರ)</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಇತ್ತೀಚಿನ ಮಳೆಯಿಂದ ಹಾನಿಗೊಳಗಾಗಿರುವ ಮನೆಗಳಿಗೆ ಪರಿಹಾರ ನೀಡುವ ಸಂಬಂಧ ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ.</p>.<p>ಅಲ್ಲದೇ, ಈವರೆಗೆ ಆಗಿರುವ ಬೆಳೆ ಹಾನಿಯ ಬಗ್ಗೆ ಇದೇ 30 ರೊಳಗೆ ಜಂಟಿ ಸಮೀಕ್ಷೆ ನಡೆಸಿ ಆಯಾ ದಿನವೇ ತಂತ್ರಾಂಶದಲ್ಲಿ ನಮೂದಿಸುವಂತೆಯೂ ಕಂದಾಯ ಇಲಾಖೆ ಸೂಚಿಸಿದೆ.</p>.<p>ಪ್ರವಾಹದಿಂದ ಆಗಿರುವ ಬೆಳೆ ಹಾನಿ ವಿವರಗಳನ್ನು ಜಂಟಿ ಸಮೀಕ್ಷೆ ನಡೆಸಿ ಪ್ರತಿನಿತ್ಯ ಪರಿಹಾರ ತಂತ್ರಾಂಶದಲ್ಲಿ ನಮೂದಿಸಬೇಕು. ಇದರ ಅನ್ವಯ ಪ್ರತಿ ದಿನ ಇನ್ಪುಟ್ ಸಬ್ಸಿಡಿಯನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಲಾಗುವುದು ಎಂದು ತಿಳಿಸಿದೆ.</p>.<p>ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ಪ್ರವಾಹ ನೀರು ನುಗ್ಗಿರುವ ಮನೆಗಳ ಗೃಹೋಪಯೋಗಿ ವಸ್ತುಗಳು ಮತ್ತು ಬಟ್ಟೆಗಳನ್ನು ಕಳೆದುಕೊಂಡ ಕುಟುಂಬಗಳಿಗೆ ತಲಾ ₹10 ಸಾವಿರದಂತೆ ಜಿಲ್ಲಾಧಿಕಾರಿಗಳು ವೈಯಕ್ತಿಕ ಖಾತೆಯಲ್ಲಿ ಲಭ್ಯವಿರುವ ಅನುದಾನದಿಂದ ಕೂಡಲೇ ಪಾವತಿ ಮಾಡಬೇಕು ಎಂದು<br />ಹೇಳಿದೆ.</p>.<p>ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಪರಿಸ್ಥಿತಿ ಅವಲೋಕಿಸಿ ಎಸ್ಡಿಆರ್ಎಫ್ ಮತ್ತು ಎನ್ಡಿ ಆರ್ಎಫ್ ಮಾರ್ಗಸೂಚಿಯಂತೆ ಹಾನಿ ವಿವರಗಳನ್ನು ನಮೂದಿಸಲು ಸಂಪೂರ್ಣ ಅಧಿಕಾರ ನೀಡಲಾಗಿದೆ ಎಂದು ಮಾರ್ಗಸೂಚಿ ತಿಳಿಸಿದೆ.<br /></p>.<p><strong>ಅತಿವೃಷ್ಟಿ ಪರಿಹಾರ (</strong>ವಿವರ;ಪರಿಹಾರ ಮೊತ್ತ)</p>.<p>ನೀರು ನುಗ್ಗಿ ಗೃಹೋಪಯೋಗಿ ವಸ್ತುಗಳ ಹಾನಿ;₹10,000<br />ಶೇ 75 ಕ್ಕಿಂತ ಹೆಚ್ಚು ಹಾನಿಯಾದ ಮನೆ(‘ಎ’ ವರ್ಗ);₹5 ಲಕ್ಷ<br />ಶೇ25 ರಿಂದ ಶೇ 75ರಷ್ಟು ಮನೆ ಹಾನಿ(‘ಬಿ’ ವರ್ಗ);₹3 ಲಕ್ಷ<br />ಶೇ15ರಿಂದ ಶೇ 25 ಭಾಗಶಃ ಮನೆ ಹಾನಿ(‘ಸಿ’ ವರ್ಗ)₹50 ಸಾವಿರ<br />(2021–22 ನೇ ಸಾಲಿನಲ್ಲಿ ಪ್ರವಾಹ/ ಅತಿವೃಷ್ಟಿಯಿಂದ ಉಂಟಾದ ಮನೆಗಳ ಹಾನಿಗೆ ಪರಿಹಾರ ದರ)</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>