<figcaption>""</figcaption>.<p><strong>ಬೆಂಗಳೂರು:</strong> ರಾಜ್ಯದ ಯಾದಗಿರಿ, ವಿಜಯಪುರ, ಕಲಬುರ್ಗಿ, ಬೀದರ್, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಆ.16ರಂದು ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.</p>.<p>ಕರಾವಳಿ ಜಿಲ್ಲೆಗಳಲ್ಲಿ ಆ.16ರಿಂದ 20ರವರೆಗೆ ಹೆಚ್ಚು ಮಳೆಯಾಗುವ ನಿರೀಕ್ಷೆಯಿದ್ದು, ಐದೂ ದಿನ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಮಳೆ ಪ್ರಮಾಣ ತಗ್ಗಿದ್ದು, ಕೆಲವೆಡೆ ಸಾಧಾರಣ ಮಳೆಯಾಗಬಹುದು.</p>.<p><strong>ಮಳೆ-ಎಲ್ಲಿ,ಎಷ್ಟು?:</strong> ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ 8 ಸೆಂ.ಮೀ ಗರಿಷ್ಠ ಮಳೆಯಾಗಿದೆ. ಕೊಟ್ಟಿಗೆಹಾರ 7, ಭಾಗಮಂಡಲ, ಕೊಡಗು 4, ಬೆಳ್ತಂಗಡಿ, ಹೊಸನಗರ, ಆಗುಂಬೆ, ಮಡಿಕೇರಿ 3,ರಾಯಚೂರು, ವಿರಾಜಪೇಟೆ 2, ಮೂಡುಬಿದರೆ, ಪುತ್ತೂರು, ಮಂಗಳೂರು, ಅಂಕೋಲಾ, ಭಟ್ಕಳ, ಬೆಳಗಾವಿ, ಹಾಸನ, ಶೃಂಗೇರಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.</p>.<p><strong>ಉತ್ತಮ ಮಳೆ:</strong> ಉತ್ತರ ಕರ್ನಾಟಕದ ಕೆಲವು ಭಾಗದಲ್ಲಿ ಕಳೆದೆರಡು ದಿನಗಳಿಂದ ಸ್ವಲ್ಪ ಬಿಡುವು ನೀಡಿದ್ದ ಮಳೆ ಶನಿವಾರ ಜೋರಾಗಿ ಸುರಿದಿದೆ.</p>.<p>ಬೆಳಗಾವಿ, ಧಾರವಾಡ, ಹುಬ್ಬಳ್ಳಿಯಲ್ಲಿ ಉತ್ತಮ ಮಳೆಯಾಗಿದೆ. ಸವದತ್ತಿ ತಾಲ್ಲೂಕಿನ ಮಲಪ್ರಭಾ (ನವಿಲುತೀರ್ಥ) ಜಲಾಶಯ ಶೇ 82ರಷ್ಟು ಭರ್ತಿಯಾಗಿದ್ದು, ನದಿಗೆ ನೀರು ಬಿಡುಗಡೆ ಪ್ರಮಾಣವನ್ನು ಕ್ರಮೇಣ ಹೆಚ್ಚಿಸಲಾಗುವುದು ಎಂದು ನೀರಾವರಿ ನಿಗಮದ<br />ಅಧಿಕಾರಿ ತಿಳಿಸಿದ್ದಾರೆ. ನೆರೆಯ ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ ಸೇರುವ ನೀರಿನ ಪ್ರಮಾಣ ಕೊಂಚ ಜಾಸ್ತಿಯಾಗಿದೆ. ಮಹಾರಾಷ್ಟ್ರದ ಸಾತಾರಾ ಜಿಲ್ಲೆಯ ಕೊಯ್ನಾ ಜಲಾಶಯದ ಪರಿಸರದಲ್ಲಿ ಶನಿವಾರ ಬೆಳಿಗ್ಗೆ ಲಘು ಭೂಕಂಪದ ವರದಿಯಾಗಿದೆ.</p>.<p>ಶಿವಮೊಗ್ಗ ತಾಲ್ಲೂಕು, ಹೊಸನಗರ ಭಾಗದಲ್ಲಿ ಉತ್ತಮ ಮಳೆಯಾಗಿದೆ.ಕರಾವಳಿ, ಮಲೆನಾಡಿನಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದೆ. ಬೀದರ್ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಿದೆ.</p>.<p><strong>ರವಿಕಿರಣ್ ಭಟ್ ಮೃತದೇಹ ಪತ್ತೆ</strong><br /><strong>ಮಡಿಕೇರಿ:</strong> ತಲಕಾವೇರಿಯಲ್ಲಿ ಬೆಟ್ಟ ಕುಸಿದ ಸ್ಥಳದಲ್ಲಿ ಶನಿವಾರ ಮತ್ತೊಂದು ಮೃತದೇಹ ಪತ್ತೆಯಾಗಿದೆ.</p>.<p>ಸಹಾಯಕ ಅರ್ಚಕ ರವಿಕಿರಣ್ ಭಟ್ (28) ಅವರ ಮೃತದೇಹ ಎಂದು ಗುರುತಿಸಲಾಗಿದೆ.</p>.<p>ಪ್ರಧಾನ ಅರ್ಚಕ ನಾರಾಯಣ ಆಚಾರ್ ಅವರ ಮೃತದೇಹ ಪತ್ತೆಯಾದ ಸ್ಥಳದಿಂದ 1 ಕಿ.ಮೀ ದೂರದಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ದುರಂತ ನಡೆದು 10 ದಿನಗಳಾಗಿದ್ದು, ಇದುವರೆಗೆ ಮೂವರ ಮೃತದೇಹ ಸಿಕ್ಕಿದೆ. ಉಳಿದ ಇಬ್ಬರಿಗೆ ಎನ್ಡಿಆರ್ಎಫ್, ಎಸ್ಡಿಆರ್ಎಫ್, ಪೊಲೀಸ್ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಯಿಂದ ಶೋಧ ಕಾರ್ಯ ಮುಂದುವರಿದಿದೆ.</p>.<p>ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಕಳ್ಳಿಗೆ ಗ್ರಾಮದ ಕನಪಾಡಿ ನಿವಾಸಿ ರಾಮಕೃಷ್ಣ ರಾವ್, ರೇಣುಕಾ ದಂಪತಿಯ ಪುತ್ರ ರವಿಕಿರಣ್. ಎರಡು ವರ್ಷಗಳಿಂದ ತಲಕಾವೇರಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದರು.</p>.<p><strong>ಪರಿಹಾರ ವಿತರಣೆ:</strong> ಭಾಗಮಂಡಲದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು, ನಾರಾಯಣ ಆಚಾರ್ ಪುತ್ರಿಯರಾದ ನಮಿತಾ, ಶಾರದಾ ಅವರಿಗೆ ಎಸ್ಡಿಆರ್ಎಫ್ನಿಂದ ತಲಾ ₹ 2.5 ಲಕ್ಷ ಮೊತ್ತದ ಚೆಕ್ ವಿತರಿಸಿದರು. ಆನಂದ ತೀರ್ಥ ಅವರ ಪರಿಹಾರವಾದ ₹ 5 ಲಕ್ಷದ ಚೆಕ್ ಅನ್ನು ಅವರ ಸಹೋದರಿ ಸುಶೀಲಾ ಅವರಿಗೆ ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<p><strong>ಬೆಂಗಳೂರು:</strong> ರಾಜ್ಯದ ಯಾದಗಿರಿ, ವಿಜಯಪುರ, ಕಲಬುರ್ಗಿ, ಬೀದರ್, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಆ.16ರಂದು ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.</p>.<p>ಕರಾವಳಿ ಜಿಲ್ಲೆಗಳಲ್ಲಿ ಆ.16ರಿಂದ 20ರವರೆಗೆ ಹೆಚ್ಚು ಮಳೆಯಾಗುವ ನಿರೀಕ್ಷೆಯಿದ್ದು, ಐದೂ ದಿನ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಮಳೆ ಪ್ರಮಾಣ ತಗ್ಗಿದ್ದು, ಕೆಲವೆಡೆ ಸಾಧಾರಣ ಮಳೆಯಾಗಬಹುದು.</p>.<p><strong>ಮಳೆ-ಎಲ್ಲಿ,ಎಷ್ಟು?:</strong> ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ 8 ಸೆಂ.ಮೀ ಗರಿಷ್ಠ ಮಳೆಯಾಗಿದೆ. ಕೊಟ್ಟಿಗೆಹಾರ 7, ಭಾಗಮಂಡಲ, ಕೊಡಗು 4, ಬೆಳ್ತಂಗಡಿ, ಹೊಸನಗರ, ಆಗುಂಬೆ, ಮಡಿಕೇರಿ 3,ರಾಯಚೂರು, ವಿರಾಜಪೇಟೆ 2, ಮೂಡುಬಿದರೆ, ಪುತ್ತೂರು, ಮಂಗಳೂರು, ಅಂಕೋಲಾ, ಭಟ್ಕಳ, ಬೆಳಗಾವಿ, ಹಾಸನ, ಶೃಂಗೇರಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.</p>.<p><strong>ಉತ್ತಮ ಮಳೆ:</strong> ಉತ್ತರ ಕರ್ನಾಟಕದ ಕೆಲವು ಭಾಗದಲ್ಲಿ ಕಳೆದೆರಡು ದಿನಗಳಿಂದ ಸ್ವಲ್ಪ ಬಿಡುವು ನೀಡಿದ್ದ ಮಳೆ ಶನಿವಾರ ಜೋರಾಗಿ ಸುರಿದಿದೆ.</p>.<p>ಬೆಳಗಾವಿ, ಧಾರವಾಡ, ಹುಬ್ಬಳ್ಳಿಯಲ್ಲಿ ಉತ್ತಮ ಮಳೆಯಾಗಿದೆ. ಸವದತ್ತಿ ತಾಲ್ಲೂಕಿನ ಮಲಪ್ರಭಾ (ನವಿಲುತೀರ್ಥ) ಜಲಾಶಯ ಶೇ 82ರಷ್ಟು ಭರ್ತಿಯಾಗಿದ್ದು, ನದಿಗೆ ನೀರು ಬಿಡುಗಡೆ ಪ್ರಮಾಣವನ್ನು ಕ್ರಮೇಣ ಹೆಚ್ಚಿಸಲಾಗುವುದು ಎಂದು ನೀರಾವರಿ ನಿಗಮದ<br />ಅಧಿಕಾರಿ ತಿಳಿಸಿದ್ದಾರೆ. ನೆರೆಯ ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ ಸೇರುವ ನೀರಿನ ಪ್ರಮಾಣ ಕೊಂಚ ಜಾಸ್ತಿಯಾಗಿದೆ. ಮಹಾರಾಷ್ಟ್ರದ ಸಾತಾರಾ ಜಿಲ್ಲೆಯ ಕೊಯ್ನಾ ಜಲಾಶಯದ ಪರಿಸರದಲ್ಲಿ ಶನಿವಾರ ಬೆಳಿಗ್ಗೆ ಲಘು ಭೂಕಂಪದ ವರದಿಯಾಗಿದೆ.</p>.<p>ಶಿವಮೊಗ್ಗ ತಾಲ್ಲೂಕು, ಹೊಸನಗರ ಭಾಗದಲ್ಲಿ ಉತ್ತಮ ಮಳೆಯಾಗಿದೆ.ಕರಾವಳಿ, ಮಲೆನಾಡಿನಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದೆ. ಬೀದರ್ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಿದೆ.</p>.<p><strong>ರವಿಕಿರಣ್ ಭಟ್ ಮೃತದೇಹ ಪತ್ತೆ</strong><br /><strong>ಮಡಿಕೇರಿ:</strong> ತಲಕಾವೇರಿಯಲ್ಲಿ ಬೆಟ್ಟ ಕುಸಿದ ಸ್ಥಳದಲ್ಲಿ ಶನಿವಾರ ಮತ್ತೊಂದು ಮೃತದೇಹ ಪತ್ತೆಯಾಗಿದೆ.</p>.<p>ಸಹಾಯಕ ಅರ್ಚಕ ರವಿಕಿರಣ್ ಭಟ್ (28) ಅವರ ಮೃತದೇಹ ಎಂದು ಗುರುತಿಸಲಾಗಿದೆ.</p>.<p>ಪ್ರಧಾನ ಅರ್ಚಕ ನಾರಾಯಣ ಆಚಾರ್ ಅವರ ಮೃತದೇಹ ಪತ್ತೆಯಾದ ಸ್ಥಳದಿಂದ 1 ಕಿ.ಮೀ ದೂರದಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ದುರಂತ ನಡೆದು 10 ದಿನಗಳಾಗಿದ್ದು, ಇದುವರೆಗೆ ಮೂವರ ಮೃತದೇಹ ಸಿಕ್ಕಿದೆ. ಉಳಿದ ಇಬ್ಬರಿಗೆ ಎನ್ಡಿಆರ್ಎಫ್, ಎಸ್ಡಿಆರ್ಎಫ್, ಪೊಲೀಸ್ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಯಿಂದ ಶೋಧ ಕಾರ್ಯ ಮುಂದುವರಿದಿದೆ.</p>.<p>ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಕಳ್ಳಿಗೆ ಗ್ರಾಮದ ಕನಪಾಡಿ ನಿವಾಸಿ ರಾಮಕೃಷ್ಣ ರಾವ್, ರೇಣುಕಾ ದಂಪತಿಯ ಪುತ್ರ ರವಿಕಿರಣ್. ಎರಡು ವರ್ಷಗಳಿಂದ ತಲಕಾವೇರಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದರು.</p>.<p><strong>ಪರಿಹಾರ ವಿತರಣೆ:</strong> ಭಾಗಮಂಡಲದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು, ನಾರಾಯಣ ಆಚಾರ್ ಪುತ್ರಿಯರಾದ ನಮಿತಾ, ಶಾರದಾ ಅವರಿಗೆ ಎಸ್ಡಿಆರ್ಎಫ್ನಿಂದ ತಲಾ ₹ 2.5 ಲಕ್ಷ ಮೊತ್ತದ ಚೆಕ್ ವಿತರಿಸಿದರು. ಆನಂದ ತೀರ್ಥ ಅವರ ಪರಿಹಾರವಾದ ₹ 5 ಲಕ್ಷದ ಚೆಕ್ ಅನ್ನು ಅವರ ಸಹೋದರಿ ಸುಶೀಲಾ ಅವರಿಗೆ ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>