ಮಂಗಳವಾರ ಒಂದೇ ದಿನ 1.61 ಲಕ್ಷ ರೈತರಿಗೆ ₹92.30 ಕೋಟಿ ಹಣವನ್ನು ಬಿಡುಗಡೆ ಮಾಡಲಾಗಿದೆ. ರೈತರ ಬ್ಯಾಂಕ್ ಖಾತೆಗಳಿಗೇ ನೇರವಾಗಿ ಹಣ ಜಮೆ ಮಾಡುವುದರಿಂದ, ಮಧ್ಯವರ್ತಿಗಳ ಆಟ ನಡೆಯುವುದಿಲ್ಲ. ಹಿಂದೆ ಮೂರು ತಿಂಗಳಿಗೆ ಒಮ್ಮೆ ಮಾತ್ರ ಪರಿಹಾರ ಹಣ ಬಿಡುಗಡೆ ಮಾಡಲಾಗುತ್ತಿತ್ತು. ಈಗ ಎರಡು– ಮೂರು ದಿನಗಳಿಗೊಮ್ಮೆ ತಂತ್ರಾಂಶದಲ್ಲಿ ನಮೂದಿಸಿ ತಕ್ಷಣವೇ ಪರಿಹಾರ ಬಿಡುಗಡೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಲಾಗಿದೆ ಎಂದರು.