ಬೆಂಗಳೂರು: ‘ಮುಜರಾಯಿ ಇಲಾಖೆಯ ಅಡಿಯಲ್ಲಿ ರಾಜ್ಯದಲ್ಲಿ ಸುಮಾರು 34 ಸಾವಿರ ‘ಸಿ’ ದರ್ಜೆಯ ದೇವಾಲಯಗಳಿವೆ. ಇವುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರ್ಚಕರಿಗೆ ಮಾಸಿಕ ಕೇವಲ ₹1,400 ಸಂಭಾವನೆ ನೀಡಲಾಗುತ್ತಿದೆ. ಇದರಿಂದಾಗಿ ಹಳ್ಳಿಗಾಡಿನಲ್ಲಿ ವಾಸಿಸುತ್ತಿರುವ ಅರ್ಚಕರ ಜೀವನ ನಿರ್ವಹಣೆ ಕಷ್ಟವಾಗಿದೆ. ಹೀಗಾಗಿ ಸರ್ಕಾರ ಈ ಮೊತ್ತವನ್ನು ₹5 ಸಾವಿರಕ್ಕೆ ಹೆಚ್ಚಿಸಬೇಕು’ ಎಂದು ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ದೇವಾಲಯಗಳ ಅರ್ಚಕರ ಮತ್ತು ಆಗಮಿಕರ ಸಂಘದ ರಾಜ್ಯಾಧ್ಯಕ್ಷ ಜಾನಕಿರಾಮ್ ಒತ್ತಾಯಿಸಿದ್ದಾರೆ.