ಬೆಂಗಳೂರು: ನಾನು ಕಾಂಗ್ರೆಸ್ ಪಕ್ಷವನ್ನು ಪ್ರೀತಿಸುತ್ತೇನೆ. ಹೀಗಾಗಿ ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಚಲಾಯಿಸಿದ್ದೇನೆ ಎಂದು ಜೆಡಿಎಸ್ ಶಾಸಕ ಕೆ. ಶ್ರೀನಿವಾಸ ಗೌಡ ಹೇಳಿದರು.
ಶುಕ್ರವಾರ ವಿಧಾನಸೌಧದಲ್ಲಿ ರಾಜ್ಯಸಭೆ ಚುನಾವಣೆಯಲ್ಲಿ ಮತ ಚಲಾಯಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, 'ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರ ಬಗ್ಗೆ ನಮಗೆ ಬೇಸರವಿದೆ. ಜೆಡಿಎಸ್ ಅಭ್ಯರ್ಥಿಗೆ ಮತ ಚಲಾಯಿಸುವಂತೆ ನಮ್ಮನ್ನು ಯಾರೂ ಕೇಳಿರಲಿಲ್ಲ' ಎಂದರು.
#WATCH | I have voted for Congress because I love it: K Srinivasa Gowda, Karnataka JD(S) leader on Rajya Sabha elections pic.twitter.com/oMSkdlYSuQ