ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪಕ್ಷದ ಹಿತದೃಷ್ಟಿಯಿಂದ, ಒಗ್ಗಟ್ಟಿನಿಂದ ಎರಡನೇ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲಾಗಿದೆ. ಖರ್ಗೆ ಅವರು ಯಾರೊಂದಿಗೂ ಮಧ್ಯಸ್ಥಿಕೆ ವಹಿಸಲು ದೆಹಲಿಗೆ ಹೋಗಿರಲಿಲ್ಲ. ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳಿದ್ದರು. ಅದು ಬಿಟ್ಟರೆ ಜೆಡಿಎಸ್ ಜತೆ ನಾವು ಮಾತುಕತೆ ನಡೆಸಿಲ್ಲ. ಅವರೂ ನಮ್ಮನ್ನು ಸಂಪರ್ಕಿಸಿಲ್ಲ’ ಎಂದು ಸ್ಪಷ್ಟಪಡಿಸಿದರು.