ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಸಭೆ ಚುನಾವಣೆ ಪರಿಣಾಮಗಳ ಬಗ್ಗೆ ಸುರ್ಜೆವಾಲಾ ಅರ್ಥ ಮಾಡಿಕೊಳ್ಳಲಿ: ಎಚ್‌ಡಿಕೆ

ಬಿಜೆಪಿಯನ್ನು ಸೋಲಿಸಲು, ಜೆಡಿಎಸ್‌ ಅನ್ನು ಕಾಂಗ್ರೆಸ್‌ ಬೆಂಬಲಿಸಬೇಕು: ಎಚ್‌ಡಿಕೆ
Last Updated 9 ಜೂನ್ 2022, 6:37 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿ ಡಿ.ಕುಪೇಂದ್ರ ರೆಡ್ಡಿ ಅವರಿಗೆ ಬೆಂಬಲ ನೀಡುವಂತೆ ಕಾಂಗ್ರೆಸ್ ಪಕ್ಷಕ್ಕೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ. ಕುಮಾರಸ್ವಾಮಿ ಗುರುವಾರ ಮನವಿ ಮಾಡಿದ್ದಾರೆ.

ಅಲ್ಲದೆ ರಾಜ್ಯಸಭೆ ಚುನಾವಣೆ ಪರಿಣಾಮಗಳ ಬಗ್ಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಅರ್ಥ ಮಾಡಿಕೊಳ್ಳಲಿ ಎಂದು ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಬಿಜೆಪಿಯನ್ನು ಸೋಲಿಸಲು, ತನಗಿಂತ ಹೆಚ್ಚು ಮತ ಹೊಂದಿರುವ ಜೆಡಿಎಸ್‌ ಅನ್ನು ಕಾಂಗ್ರೆಸ್‌ ಬೆಂಬಲಿಸಬೇಕು ಎಂದು ಹೇಳಿದ್ದಾರೆ.

ಜೆಡಿಎಸ್ ಪಕ್ಷವು ಡಿ.ಕುಪೇಂದ್ರ ರೆಡ್ಡಿ ಅವರನ್ನು ರಾಜ್ಯಸಭೆ ಚುನಾವಣೆಗೆ ತನ್ನ ಮೊದಲ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ. ಅವರು ಉದ್ದಿಮೆದಾರರು, ಸಮಾಜ ಸೇವಕರು ಮತ್ತು ಪ್ರಗತಿಪರ ಚಿಂತಕರು. ರಾಜ್ಯಸಭೆ ಸದಸ್ಯರಾಗಿ ಅನುಭವವುಳ್ಳ ಅವರನ್ನು ಎಲ್ಲ ಪಕ್ಷಗಳು ಮುಕ್ತ ಮನಸ್ಸಿನಿಂದ ಬೆಂಬಲಿಸಬೇಕು. ಜಾತ್ಯತೀತ ಶಕ್ತಿಗಳನ್ನು ಬಲಪಡಿಸಲು ಕಾಂಗ್ರೆಸ್‌ ಪಕ್ಷ ಕುಪೇಂದ್ರ ರೆಡ್ಡಿ ಅವರಿಗೆ ಪೂರ್ಣ ಬೆಂಬಲ ಕೊಡಬೇಕು ಎಂದು ಹೇಳಿದ್ದಾರೆ.

ಈ ಚುನಾವಣೆಯ ಪರಿಣಾಮಗಳ ಬಗ್ಗೆ ಇತಿಹಾಸ ಮತ್ತು ಜನತೆ ಭವಿಷ್ಯದ ದಿನಗಳಲ್ಲಿ ನಿರ್ಧರಿಸುತ್ತಾರೆ ಎಂಬುದರಲ್ಲಿ ಸಂಶಯವಿಲ್ಲ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಅವರು ಈ ಅಂಶ ಅರ್ಥ ಮಾಡಿಕೊಳ್ಳುತ್ತಾರೆ ಎಂದು ನಂಬಿದ್ದೇನೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT