ಬೆಂಗಳೂರು: ರಾಜ್ಯೋತ್ಸವ ಪ್ರಶಸ್ತಿಗಳಿಗೆ ಆಯ್ಕೆಯಾದ ಸಾಧಕರ ಅಂತಿಮ ಪಟ್ಟಿ ಶನಿವಾರ ಹೊರಬೀಳಲಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಅಧ್ಯಕ್ಷತೆಯಲ್ಲಿ ಶುಕ್ರವಾರ ಉನ್ನತಮಟ್ಟದ ಸಮಿತಿ ಸಭೆ ನಡೆಯಿತು. ಅದರಲ್ಲಿ 134 ಜನರ ಪಟ್ಟಿಯೊಂದನ್ನು ಸಿದ್ಧಪಡಿಸಲಾಗಿದ್ದು, ಬೊಮ್ಮಾಯಿ ಅವರು ರಾತ್ರಿ ಮತ್ತೊಂದು ಸುತ್ತಿನ ಸಭೆ ನಡೆಸಿ ಪಟ್ಟಿಯನ್ನು ಆಖೈರುಗೊಳಿಸುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.
ಈ ವರ್ಷ 67 ನೇ ರಾಜ್ಯೋತ್ಸವ ಆಗಿರುವುದರಿಂದ ಒಟ್ಟು 67 ಮಂದಿ ಸಾಧಕರಿಗೆ ಪ್ರಶಸ್ತಿಗಳನ್ನು ನೀಡಲಾಗುವುದು. ಹೈಕೋರ್ಟ್ ಆದೇಶ ಇರುವುದರಿಂದ ಈ ಬಾರಿಯೂ 60 ವರ್ಷ ಮೇಲ್ಪಟ್ಟವರಿಗೆ ಪ್ರಶಸ್ತಿ ನೀಡಲಾಗುವುದು ಎಂದೂ ತಿಳಿಸಿವೆ.