ಈ ವಿಚಾರವಾಗಿ ಗುರುವಾರ ಟ್ವೀಟ್ ಮಾಡಿರುವ ಅವರು, ‘ಬೆಳಗಾವಿಯಲ್ಲಿ ಎಂಇಎಸ್ ಮುಖಂಡರಿಗೆ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಕನ್ನಡ ಕಾರ್ಯಕರ್ತರ ಮೇಲೆ ಐಪಿಸಿ ಸೆಕ್ಷನ್ 307ರ ಅಡಿಯಲ್ಲಿ ಕೊಲೆಯತ್ನ ಪ್ರಕರಣ ದಾಖಲಿಸಿಕೊಂಡಿರುವುದು ಅಕ್ಷಮ್ಯ. ಸರ್ಕಾರ ಕೂಡಲೇ ಮೊಕದ್ದಮೆ ಕೈಬಿಟ್ಟು ಎಲ್ಲ ಕಾರ್ಯಕರ್ತರನ್ನು ಬಿಡುಗಡೆ ಮಾಡಬೇಕು. ಇಲ್ಲವಾದಲ್ಲಿ ತೀವ್ರ ಪ್ರತಿಭಟನೆ ನಡೆಸಬೇಕಾದೀತು’ ಎಂದು ಎಚ್ಚರಿಕೆ ನೀಡಿದ್ದಾರೆ.