ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ‘ಗಡಿ ವಿಚಾರದಲ್ಲಿ ಮಹಾರಾಷ್ಟ್ರ ತಗಾದೆ ತೆಗೆದಾಗ ನಮ್ಮ ನಿಲುವು ಸ್ಪಷ್ಟಪಡಿಸಲಾಗಿದೆ. ಸಂಗೊಳ್ಳಿ ರಾಯಣ್ಣನ ಮೂರ್ತಿ ಪೂರ್ಣಗೊಳಿಸಲಾಗಿದೆ. ಕನ್ನಡಿಗರ ಇತಿಹಾಸ, ಸಾಹಿತ್ಯ, ಆಡಳಿತ, ಪರಂಪರೆ ಸಂರಕ್ಷಿಸಲಾಗಿದೆ. ಕನ್ನಡಕ್ಕಾಗಿ ಉದ್ಯೋಗ ನೀತಿ ರೂಪಿಸಿ, ಶೇ 80ರಷ್ಟು ಮೀಸಲಾತಿ ಕಲ್ಪಿಸಲಾಗಿದೆ’ ಎಂದು ಹೇಳಿದರು.