ಬೆಂಗಳೂರು: ‘ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಅವರಿಗೆ ನವೆಂಬರ್ 1ರಂದು ಮರಣೋತ್ತರ ವಾಗಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ತಿಳಿಸಿದರು.
ಲಾಲ್ಬಾಗ್ನ ಗಾಜಿನ ಮನೆಯಲ್ಲಿ ಆಯೋಜಿಸಿರುವ 212ನೇ ಫಲಪುಷ್ಪ ಪ್ರದರ್ಶ ನಕ್ಕೆ ಚಾಲನೆ ನೀಡಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
‘ಪ್ರಶಸ್ತಿ ಪ್ರದಾನ ಸಮಾರಂಭದ ಸಿದ್ಧತೆಗಳನ್ನು ಕೈಗೊಳ್ಳಲು ಸಮಿತಿ ರಚಿಸಲಾಗುವುದು. ಈ ಸಮಿತಿಯಲ್ಲಿ ಡಾ.ರಾಜ್ಕುಮಾರ್ ಕುಟುಂಬದ ಸದಸ್ಯರೂ ಇರುತ್ತಾರೆ’ ಎಂದರು.