<p><strong>ಬೆಂಗಳೂರು:</strong> ರಾಜ್ಯದಲ್ಲಿ ಇದುವರೆಗೆ 2,856 ಕಪ್ಪು ಶಿಲೀಂಧ್ರ (ಬ್ಲ್ಯಾಕ್ ಫಂಗಸ್) ಪ್ರಕರಣಗಳು ಪತ್ತೆಯಾಗಿದ್ದು, 225 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.</p>.<p>ಆರೋಗ್ಯ ಇಲಾಖೆ ಹಂಚಿಕೊಂಡಿರುವ ಮಾಹಿತಿ ಪ್ರಕಾರ, ರಾಜ್ಯದಾದ್ಯಂತ ವಿವಿಧ ಆಸ್ಪತ್ರೆಗಳಲ್ಲಿ 2,316 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಇದುವರೆಗೆ 191 ಮಂದಿ ಗುಣಮುಖರಾಗಿದ್ದಾರೆ. ಬೆಂಗಳೂರಿನಲ್ಲಿ ಗರಿಷ್ಠ 959 ಸೋಂಕಿತರಿದ್ದು, ಅವರಲ್ಲಿ 825 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 49 ಮಂದಿ ಗುಣಮುಖರಾಗಿದ್ದಾರೆ. 72 ಮಂದಿ ಮೃತಪಟ್ಟಿದ್ದಾರೆ.</p>.<p>ಧಾರವಾಡದಲ್ಲಿ 229, ಕಲಬುರ್ಗಿಯಲ್ಲಿ 168, ಬೆಳಗಾವಿಯಲ್ಲಿ 159, ವಿಜಯಪುರದಲ್ಲಿ 130, ಚಿತ್ರದುರ್ಗದಲ್ಲಿ 126, ಬಳ್ಳಾರಿಯಲ್ಲಿ 110, ಬಾಗಲಕೋಟೆಯಲ್ಲಿ 109, ಮೈಸೂರು ಮತ್ತು ರಾಯಚೂರಿನಲ್ಲಿ ತಲಾ 98 ಪ್ರಕರಣಗಳಿವೆ.</p>.<p>ಕೋವಿಡ್ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಕಪ್ಪು ಶಿಲೀಂಧ್ರ ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಿವೆ.</p>.<p>ರಾಜ್ಯದಲ್ಲಿ ಇಂದು 5,783 ಹೊಸಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 168 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಸದ್ಯ ರಾಜ್ಯದಲ್ಲಿ 1,37,050 ಸಕ್ರಿಯ ಪ್ರಕರಣಗಳಿವೆ.</p>.<p><strong>ಇದನ್ನೂ ಓದಿ...<a href="https://www.prajavani.net/karnataka-news/karnataka-reports-5783-new-covid19-cases-168-deaths-and-15290-recoveries-today-840059.html" target="_blank"> Covid-19 Karnataka Update: 5,783 ಹೊಸ ಪ್ರಕರಣ, 168 ಮಂದಿ ಸಾವು</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದಲ್ಲಿ ಇದುವರೆಗೆ 2,856 ಕಪ್ಪು ಶಿಲೀಂಧ್ರ (ಬ್ಲ್ಯಾಕ್ ಫಂಗಸ್) ಪ್ರಕರಣಗಳು ಪತ್ತೆಯಾಗಿದ್ದು, 225 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.</p>.<p>ಆರೋಗ್ಯ ಇಲಾಖೆ ಹಂಚಿಕೊಂಡಿರುವ ಮಾಹಿತಿ ಪ್ರಕಾರ, ರಾಜ್ಯದಾದ್ಯಂತ ವಿವಿಧ ಆಸ್ಪತ್ರೆಗಳಲ್ಲಿ 2,316 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಇದುವರೆಗೆ 191 ಮಂದಿ ಗುಣಮುಖರಾಗಿದ್ದಾರೆ. ಬೆಂಗಳೂರಿನಲ್ಲಿ ಗರಿಷ್ಠ 959 ಸೋಂಕಿತರಿದ್ದು, ಅವರಲ್ಲಿ 825 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 49 ಮಂದಿ ಗುಣಮುಖರಾಗಿದ್ದಾರೆ. 72 ಮಂದಿ ಮೃತಪಟ್ಟಿದ್ದಾರೆ.</p>.<p>ಧಾರವಾಡದಲ್ಲಿ 229, ಕಲಬುರ್ಗಿಯಲ್ಲಿ 168, ಬೆಳಗಾವಿಯಲ್ಲಿ 159, ವಿಜಯಪುರದಲ್ಲಿ 130, ಚಿತ್ರದುರ್ಗದಲ್ಲಿ 126, ಬಳ್ಳಾರಿಯಲ್ಲಿ 110, ಬಾಗಲಕೋಟೆಯಲ್ಲಿ 109, ಮೈಸೂರು ಮತ್ತು ರಾಯಚೂರಿನಲ್ಲಿ ತಲಾ 98 ಪ್ರಕರಣಗಳಿವೆ.</p>.<p>ಕೋವಿಡ್ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಕಪ್ಪು ಶಿಲೀಂಧ್ರ ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಿವೆ.</p>.<p>ರಾಜ್ಯದಲ್ಲಿ ಇಂದು 5,783 ಹೊಸಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 168 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಸದ್ಯ ರಾಜ್ಯದಲ್ಲಿ 1,37,050 ಸಕ್ರಿಯ ಪ್ರಕರಣಗಳಿವೆ.</p>.<p><strong>ಇದನ್ನೂ ಓದಿ...<a href="https://www.prajavani.net/karnataka-news/karnataka-reports-5783-new-covid19-cases-168-deaths-and-15290-recoveries-today-840059.html" target="_blank"> Covid-19 Karnataka Update: 5,783 ಹೊಸ ಪ್ರಕರಣ, 168 ಮಂದಿ ಸಾವು</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>