ಬೆಂಗಳೂರು: ರಾಜ್ಯದಲ್ಲಿ ಗುರುವಾರ 25,005 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಎಂಟು ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಕಳೆದ 24 ಗಂಟೆಗಳಲ್ಲಿ 2,363 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 1,15,733 ಸಕ್ರಿಯ ಪ್ರಕರಣಗಳಿವೆ’ ಎಂದು ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ 12.39 ರಷ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಇಂದು 18,374 ಹೊಸ ಪ್ರಕರಣ ಪತ್ತೆಯಾಗಿದ್ದು, ಮೂವರು ಸೋಂಕಿತರು ಮೃತಪಟ್ಟಿದ್ದಾರೆ.