<p><strong>ಬೆಳಗಾವಿ:</strong> ರಿಯಲ್ ಎಸ್ಟೇಟ್ ಉದ್ದೇಶಕ್ಕಾಗಿ ಕೃಷಿ ಭೂಮಿಯನ್ನು ಅತಿ ಚಿಕ್ಕದಾಗಿ ತುಂಡರಿಸಿ ಬಳಸುವುದನ್ನು ತಡೆಯಲು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ನಿಯಮ ಜಾರಿಗೆ ತಂದಿದ್ದು, ಇಂತಹ ಭೂಮಿಗೆ ಪಹಣಿ ಮತ್ತು 11 ಇ ಅಡಿ ನಕ್ಷೆ ಮಾಡಿಕೊಡುವುದನ್ನು ನಿಷೇಧಿಸಿದೆ.</p>.<p>ಹೀಗಾಗಿ ಕೆಲವೇ ಗುಂಟೆ ಕೃಷಿ ಭೂಮಿಯಲ್ಲಿ ನಿವೇಶನಗಳನ್ನು ರೂಪಿಸುವುದು ಮತ್ತು ಕಟ್ಟಡಗಳನ್ನು ನಿರ್ಮಿಸಲು ಇನ್ನು ಮುಂದೆ ಸಾಧ್ಯವಿಲ್ಲ.</p>.<p>ಈ ಸಂಬಂಧ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂಮಾರಾಟ ಇಲಾಖೆ ಆದೇಶವೊಂದನ್ನು ಹೊರಡಿಸಿದೆ. ಅದರ ಪ್ರಕಾರ ಇನ್ನು ಮುಂದೆ ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ 3 ಗುಂಟೆ ಮತ್ತು ಇನ್ನುಳಿದ ಜಿಲ್ಲೆಗಳಲ್ಲಿ 5 ಗುಂಟೆಗಿಂತ ಕಡಿಮೆ ವಿಸ್ತೀರ್ಣ ಹೊಂದಿರುವ ಸರ್ವೇ ನಂಬರ್ಗಳನ್ನು (ಹಿಸ್ಸಾ ನಂಬರ್ ಒಳಗೊಂಡಂತೆ) ಹೊಸದಾಗಿ ಸೃಜಿಸುವಂತಿಲ್ಲ.</p>.<p>‘ರಾಜ್ಯದಲ್ಲಿ ಕೃಷಿ ಭೂಮಿಯನ್ನು ತುಂಡು ತುಂಡು ಮಾಡಿ ಮಾರಾಟ ಮಾಡುತ್ತಿದ್ದು, ಈ ರೀತಿ ಮಾರಾಟ ಮಾಡುತ್ತಿರುವ ಭೂಮಿಗಳನ್ನುಕೃಷಿ ಉದ್ದೇಶಗಳಿಗೆ ಬಳಸುತ್ತಿಲ್ಲ. ನಿವೇಶನ, ಕಟ್ಟಡ ನಿರ್ಮಾಣಕ್ಕಾಗಿ ಬಳಸಲಾಗುತ್ತಿದೆ. ನಗರ ಪ್ರದೇಶಗಳಲ್ಲಿ ಈ ಪ್ರವೃತ್ತಿ ಹೆಚ್ಚಾಗಿ ನಡೆಯುತ್ತಿದೆ. ಇದರಿಂದಾಗಿ ನಗರೀಕರಣ ಸುವ್ಯವಸ್ಥಿತವಾಗಿ ನಡೆಯುತ್ತಿಲ್ಲ ಹಾಗೂ ಅವಶ್ಯಕ ಮೂಲಸೌಕರ್ಯಗಳಾದ ರಸ್ತೆ, ಒಳಚರಂಡಿ, ನೀರು, ಇತ್ಯಾದಿಗಳನ್ನು ಪೂರೈಸಲು ಕಷ್ಟವಾಗುತ್ತಿದೆ’ ಎಂದು ಕಂದಾಯ ಇಲಾಖೆ ಮೂಲಗಳು ತಿಳಿಸಿವೆ.</p>.<p>ಕರ್ನಾಟಕ ನಗರಾಭಿವೃದ್ಧಿ ಕಾಯ್ದೆಯಡಿ ನಿಯಮ ಬದ್ಧವಾಗಿ ಅನುಮೋದನೆ ಪಡೆಯದೇ ಕೃಷಿ ಭೂಮಿಗಳನ್ನು ನಿವೇಶನ ಮತ್ತು ಕಟ್ಟಡಗಳಿಗಾಗಿ ಪರಿವರ್ತಿಸುತ್ತಿರುವ ಬಗ್ಗೆ ರಾಜ್ಯದಾದ್ಯಂತ ದೂರುಗಳು ಬಂದಿದ್ದವು.</p>.<p>ಇದೊಂದು ದೊಡ್ಡ ಸಮಸ್ಯೆಯಾಗಿದ್ದು, ಇದಕ್ಕೆ ಕಡಿವಾಣ ಹಾಕಲು ಭೂಮಿಯನ್ನು ತುಂಡು– ತುಂಡು ಮಾಡುವುದನ್ನು ನಿರ್ಬಂಧಿಸಿ, ಪಹಣಿ ಮಾಡದೇ ಇರಲು ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು.</p>.<p>ಕೃಷಿ ಭೂಮಿ ತುಂಡು ಮಾಡಿ ಉದ್ದೇಶಪೂರ್ವಕವಾಗಿ ಮಾರಾಟ ಮಾಡುವುದು ‘ಕರ್ನಾಟಕ ಭೂಕಂದಾಯ ಅಧಿನಿಯಮ<br />1964’ರ ಕಲಂ 95ರ ಸ್ಪಷ್ಟ ಉಲ್ಲಂಘನೆ. ತುಂಡು ಭೂಮಿಗಳಲ್ಲಿ ಕೃಷಿ ನಡೆಸಲು ಆಗುವುದಿಲ್ಲ.</p>.<p>ರಿಯಲ್ ಎಸ್ಟೇಟ್ ಉದ್ದೇಶಕ್ಕೆ ಬಳಕೆ ಆಗುತ್ತಿದೆ ಎಂದು ಕಂದಾಯ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದರು.</p>.<p><strong>ಹೊಸ ಆದೇಶದಲ್ಲಿ ಏನಿದೆ?</strong><br /><br />* ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ 3 ಗುಂಟೆ ಮತ್ತು ಇತರ ಜಿಲ್ಲೆಗಳಲ್ಲಿ 5 ಗುಂಟೆಗಿಂತ ಕಡಿಮೆ ವಿಸ್ತೀರ್ಣಕ್ಕೆ 11ಇ ನಕ್ಷೆ ತಯಾರಿಸುವಂತಿಲ್ಲ ಮತ್ತು ವಿತರಿಸುವಂತಿಲ್ಲ.</p>.<p>* ಈಗಾಗಲೇ ಅಸ್ತಿತ್ವದಲ್ಲಿರುವ ಸರ್ವೆ ನಂಬರ್ ಅಥವಾ ಪಹಣಿಗಳು ಕನಿಷ್ಠ ವಿಸ್ತೀರ್ಣಕ್ಕಿಂತ ಕಡಿಮೆ ಇದ್ದರೂ ಅಂತಹ ಸರ್ವೆ ನಂಬರ್ ಅಥವಾ ಪಹಣಿಗಳು ಹಾಗೆಯೇ ಮುಂದುವರೆಯುತ್ತವೆ. ಅವುಗಳನ್ನು ಸಂಪೂರ್ಣವಾಗಿ ಮಾನ್ಯ ಮಾಡಲಾಗುತ್ತದೆ.</p>.<p>* ಪಿತ್ರಾರ್ಜಿತ ಅಥವಾ ಆನುವಂಶಿಕವಾಗಿ ಬಂದ ಹಕ್ಕುಗಳ ಮೇಲೆ ಉಲ್ಲೇಖಿಸಿದ ವಿಸ್ತೀರ್ಣಕ್ಕಿಂತ<br />ಕಡಿಮೆ ಇದ್ದರೂ ಅವುಗಳ ಹೊಸ ಪಹಣಿ ರಚಿಸಬಹುದು ಮತ್ತು ಪೋಡಿ ಮಾಡಬಹುದು.</p>.<p>* ಈಗಾಗಲೇ ಪಹಣಿಗಳಲ್ಲಿ ದಾಖಲಾದ ಮತ್ತು ಅಸ್ತಿತ್ವದಲ್ಲಿರುವ ಮಾಲೀಕರ ಹಕ್ಕುಗಳ ಪ್ರಕಾರ ಪೋಡಿಯನ್ನು ಮೇಲೆ ಉಲ್ಲೇಖಿಸಿದಕ್ಕಿಂತ ಕನಿಷ್ಠ ವಿಸ್ತೀರ್ಣ ಪ್ರಮಾಣದಲ್ಲಿದ್ದರೆ ಅದರಂತೆ ಹೊಸ ಪಹಣಿ ರಚಿಸಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ರಿಯಲ್ ಎಸ್ಟೇಟ್ ಉದ್ದೇಶಕ್ಕಾಗಿ ಕೃಷಿ ಭೂಮಿಯನ್ನು ಅತಿ ಚಿಕ್ಕದಾಗಿ ತುಂಡರಿಸಿ ಬಳಸುವುದನ್ನು ತಡೆಯಲು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ನಿಯಮ ಜಾರಿಗೆ ತಂದಿದ್ದು, ಇಂತಹ ಭೂಮಿಗೆ ಪಹಣಿ ಮತ್ತು 11 ಇ ಅಡಿ ನಕ್ಷೆ ಮಾಡಿಕೊಡುವುದನ್ನು ನಿಷೇಧಿಸಿದೆ.</p>.<p>ಹೀಗಾಗಿ ಕೆಲವೇ ಗುಂಟೆ ಕೃಷಿ ಭೂಮಿಯಲ್ಲಿ ನಿವೇಶನಗಳನ್ನು ರೂಪಿಸುವುದು ಮತ್ತು ಕಟ್ಟಡಗಳನ್ನು ನಿರ್ಮಿಸಲು ಇನ್ನು ಮುಂದೆ ಸಾಧ್ಯವಿಲ್ಲ.</p>.<p>ಈ ಸಂಬಂಧ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂಮಾರಾಟ ಇಲಾಖೆ ಆದೇಶವೊಂದನ್ನು ಹೊರಡಿಸಿದೆ. ಅದರ ಪ್ರಕಾರ ಇನ್ನು ಮುಂದೆ ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ 3 ಗುಂಟೆ ಮತ್ತು ಇನ್ನುಳಿದ ಜಿಲ್ಲೆಗಳಲ್ಲಿ 5 ಗುಂಟೆಗಿಂತ ಕಡಿಮೆ ವಿಸ್ತೀರ್ಣ ಹೊಂದಿರುವ ಸರ್ವೇ ನಂಬರ್ಗಳನ್ನು (ಹಿಸ್ಸಾ ನಂಬರ್ ಒಳಗೊಂಡಂತೆ) ಹೊಸದಾಗಿ ಸೃಜಿಸುವಂತಿಲ್ಲ.</p>.<p>‘ರಾಜ್ಯದಲ್ಲಿ ಕೃಷಿ ಭೂಮಿಯನ್ನು ತುಂಡು ತುಂಡು ಮಾಡಿ ಮಾರಾಟ ಮಾಡುತ್ತಿದ್ದು, ಈ ರೀತಿ ಮಾರಾಟ ಮಾಡುತ್ತಿರುವ ಭೂಮಿಗಳನ್ನುಕೃಷಿ ಉದ್ದೇಶಗಳಿಗೆ ಬಳಸುತ್ತಿಲ್ಲ. ನಿವೇಶನ, ಕಟ್ಟಡ ನಿರ್ಮಾಣಕ್ಕಾಗಿ ಬಳಸಲಾಗುತ್ತಿದೆ. ನಗರ ಪ್ರದೇಶಗಳಲ್ಲಿ ಈ ಪ್ರವೃತ್ತಿ ಹೆಚ್ಚಾಗಿ ನಡೆಯುತ್ತಿದೆ. ಇದರಿಂದಾಗಿ ನಗರೀಕರಣ ಸುವ್ಯವಸ್ಥಿತವಾಗಿ ನಡೆಯುತ್ತಿಲ್ಲ ಹಾಗೂ ಅವಶ್ಯಕ ಮೂಲಸೌಕರ್ಯಗಳಾದ ರಸ್ತೆ, ಒಳಚರಂಡಿ, ನೀರು, ಇತ್ಯಾದಿಗಳನ್ನು ಪೂರೈಸಲು ಕಷ್ಟವಾಗುತ್ತಿದೆ’ ಎಂದು ಕಂದಾಯ ಇಲಾಖೆ ಮೂಲಗಳು ತಿಳಿಸಿವೆ.</p>.<p>ಕರ್ನಾಟಕ ನಗರಾಭಿವೃದ್ಧಿ ಕಾಯ್ದೆಯಡಿ ನಿಯಮ ಬದ್ಧವಾಗಿ ಅನುಮೋದನೆ ಪಡೆಯದೇ ಕೃಷಿ ಭೂಮಿಗಳನ್ನು ನಿವೇಶನ ಮತ್ತು ಕಟ್ಟಡಗಳಿಗಾಗಿ ಪರಿವರ್ತಿಸುತ್ತಿರುವ ಬಗ್ಗೆ ರಾಜ್ಯದಾದ್ಯಂತ ದೂರುಗಳು ಬಂದಿದ್ದವು.</p>.<p>ಇದೊಂದು ದೊಡ್ಡ ಸಮಸ್ಯೆಯಾಗಿದ್ದು, ಇದಕ್ಕೆ ಕಡಿವಾಣ ಹಾಕಲು ಭೂಮಿಯನ್ನು ತುಂಡು– ತುಂಡು ಮಾಡುವುದನ್ನು ನಿರ್ಬಂಧಿಸಿ, ಪಹಣಿ ಮಾಡದೇ ಇರಲು ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು.</p>.<p>ಕೃಷಿ ಭೂಮಿ ತುಂಡು ಮಾಡಿ ಉದ್ದೇಶಪೂರ್ವಕವಾಗಿ ಮಾರಾಟ ಮಾಡುವುದು ‘ಕರ್ನಾಟಕ ಭೂಕಂದಾಯ ಅಧಿನಿಯಮ<br />1964’ರ ಕಲಂ 95ರ ಸ್ಪಷ್ಟ ಉಲ್ಲಂಘನೆ. ತುಂಡು ಭೂಮಿಗಳಲ್ಲಿ ಕೃಷಿ ನಡೆಸಲು ಆಗುವುದಿಲ್ಲ.</p>.<p>ರಿಯಲ್ ಎಸ್ಟೇಟ್ ಉದ್ದೇಶಕ್ಕೆ ಬಳಕೆ ಆಗುತ್ತಿದೆ ಎಂದು ಕಂದಾಯ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದರು.</p>.<p><strong>ಹೊಸ ಆದೇಶದಲ್ಲಿ ಏನಿದೆ?</strong><br /><br />* ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ 3 ಗುಂಟೆ ಮತ್ತು ಇತರ ಜಿಲ್ಲೆಗಳಲ್ಲಿ 5 ಗುಂಟೆಗಿಂತ ಕಡಿಮೆ ವಿಸ್ತೀರ್ಣಕ್ಕೆ 11ಇ ನಕ್ಷೆ ತಯಾರಿಸುವಂತಿಲ್ಲ ಮತ್ತು ವಿತರಿಸುವಂತಿಲ್ಲ.</p>.<p>* ಈಗಾಗಲೇ ಅಸ್ತಿತ್ವದಲ್ಲಿರುವ ಸರ್ವೆ ನಂಬರ್ ಅಥವಾ ಪಹಣಿಗಳು ಕನಿಷ್ಠ ವಿಸ್ತೀರ್ಣಕ್ಕಿಂತ ಕಡಿಮೆ ಇದ್ದರೂ ಅಂತಹ ಸರ್ವೆ ನಂಬರ್ ಅಥವಾ ಪಹಣಿಗಳು ಹಾಗೆಯೇ ಮುಂದುವರೆಯುತ್ತವೆ. ಅವುಗಳನ್ನು ಸಂಪೂರ್ಣವಾಗಿ ಮಾನ್ಯ ಮಾಡಲಾಗುತ್ತದೆ.</p>.<p>* ಪಿತ್ರಾರ್ಜಿತ ಅಥವಾ ಆನುವಂಶಿಕವಾಗಿ ಬಂದ ಹಕ್ಕುಗಳ ಮೇಲೆ ಉಲ್ಲೇಖಿಸಿದ ವಿಸ್ತೀರ್ಣಕ್ಕಿಂತ<br />ಕಡಿಮೆ ಇದ್ದರೂ ಅವುಗಳ ಹೊಸ ಪಹಣಿ ರಚಿಸಬಹುದು ಮತ್ತು ಪೋಡಿ ಮಾಡಬಹುದು.</p>.<p>* ಈಗಾಗಲೇ ಪಹಣಿಗಳಲ್ಲಿ ದಾಖಲಾದ ಮತ್ತು ಅಸ್ತಿತ್ವದಲ್ಲಿರುವ ಮಾಲೀಕರ ಹಕ್ಕುಗಳ ಪ್ರಕಾರ ಪೋಡಿಯನ್ನು ಮೇಲೆ ಉಲ್ಲೇಖಿಸಿದಕ್ಕಿಂತ ಕನಿಷ್ಠ ವಿಸ್ತೀರ್ಣ ಪ್ರಮಾಣದಲ್ಲಿದ್ದರೆ ಅದರಂತೆ ಹೊಸ ಪಹಣಿ ರಚಿಸಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>