'ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರವಾಗಿ ಕಾಂಗ್ರೆಸ್ನವರು ಅನಗತ್ಯವಾಗಿ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ' ಎಂದು ಆರೋಪಿಸಿದ ಸುನಿಲ್ ಕುಮಾರ್ ಅವರು, 'ಕೆಲವು ಸತ್ಯ ಸಂಗತಿಗಳು ಅವರಿಗೆ ಕಹಿಯಾಗಿ ಕಾಣುತ್ತವೆ. ಹಾಗೆಂದು ನಾವು ನೈಜ ಇತಿಹಾಸವನ್ನು ಮುಚ್ಚಿಡಲು ಆಗುವುದಿಲ್ಲ. ಇತಿಹಾಸದಲ್ಲಿ ಮುಚ್ಚಿಟ್ಟಿದ್ದನ್ನು ತಿಳಿಸುವುದಕ್ಕೆ ಹೊರಟಿದ್ದೇವೆ ಅಷ್ಟೇ. ಆದರೆ ಕಾಂಗ್ರೆಸ್ನವರು ವಿವಾದಗಳನ್ನು ಹುಟ್ಟುಹಾಕಿ ರಾಜಕೀಯ ಮಾಡಲು ಹೊರಟಿದ್ದಾರೆ' ಎಂದು ದೂರಿದರು.