ಬೆಂಗಳೂರು: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು 2022–23ನೇ ಸಾಲಿನ ‘ಕರ್ನಾಟಕ ಕಲಾಶ್ರೀ’ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ‘ಗೌರವ ಪ್ರಶಸ್ತಿ’ಗೆಚನ್ನರಾಯಪಟ್ಟಣದ ಗಾಯಕಸಿ.ಆರ್. ರಾಮಚಂದ್ರ ಹಾಗೂಮಂಗಳೂರಿನ ನೃತ್ಯ ಗುರುಗೀತಾ ಸರಳಾಯ ಆಯ್ಕೆಯಾಗಿದ್ದಾರೆ.
ಇಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿಅಕಾಡೆಮಿ ಅಧ್ಯಕ್ಷ ಆನೂರು ಅನಂತಕೃಷ್ಣ ಶರ್ಮ ಅವರು ಪ್ರಶಸ್ತಿ ಪಟ್ಟಿಯನ್ನು ಬಿಡುಗಡೆ ಮಾಡಿದರು.ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ನೃತ್ಯ ಸೇರಿದಂತೆ ಏಳು ವಿಭಾಗಗಳಿಂದ 16 ಕಲಾವಿದರು ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಗೌರವ ಪ್ರಶಸ್ತಿಯು ತಲಾ ₹ 50 ಸಾವಿರ ಹಾಗೂ ವಾರ್ಷಿಕ ಪ್ರಶಸ್ತಿ ತಲಾ ₹ 25 ಸಾವಿರ ನಗದು ಬಹುಮಾನ ಹೊಂದಿದೆ.
‘ಪ್ರಶಸ್ತಿ ಪ್ರದಾನ ಸಮಾರಂಭವನ್ನು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿಸೆಪ್ಟೆಂಬರ್ ತಿಂಗಳ ಕೊನೆಯ ವಾರ ಹಮ್ಮಿಕೊಳ್ಳಲಾಗುವುದು’ ಎಂದು ಆನೂರು ಅನಂತಕೃಷ್ಣ ಶರ್ಮ ತಿಳಿಸಿದರು.
‘ಕರ್ನಾಟಕ ಕಲಾಶ್ರೀ’ ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾದವರು
ಕರ್ನಾಟಕ ಸಂಗೀತ
1. ಸಿ.ಎ. ನಾಗರಾಜ, ಮೈಸೂರು (ಹಾಡುಗಾರಿಕೆ) 2. ಎಂ. ನಾರಾಯಣ, ಮಂಗಳೂರು (ಹಾಡುಗಾರಿಕೆ) 3. ಪಿ.ಕೆ. ದಾಮೋದರಂ, ಪುತ್ತೂರು (ಸ್ಯಾಕ್ಸೋಫೋನ್)