<p><strong>ಬೆಳಗಾವಿ</strong>: ‘ದೇವಸ್ಥಾನಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ಹೇರಿರುವುದು ಬಿಜೆಪಿಯ ರಹಸ್ಯ ಕಾರ್ಯಸೂಚಿಯಾಗಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆರೋಪಿಸಿದರು.</p>.<p>ಇಲ್ಲಿ ಪತ್ರಕರ್ತರೊಂದಿಗೆ ಗುರುವಾರ ಮಾತನಾಡಿದ ಅವರು, ‘ನಮ್ಮದು ಜಾತ್ಯತೀತ ದೇಶ. ವಿವಿಧ ಜಾತಿ–ಧರ್ಮಗಳು ಕೂಡಿದೆ. ಎಲ್ಲರೊಂದಿಗೂ ಒಡನಾಟ ಇರುತ್ತದೆ. ಮುಸ್ಲಿಮರಿಗೆ ವ್ಯಾಪಾರವನ್ನು ಸಂಪೂರ್ಣವಾಗಿ ನಿರ್ಬಂಧಿಸುವುದು ಅಸಾಧ್ಯ. ಎಲ್ಲ ಸಮುದಾಯದವರೂ ಒಂದಾಗಿ ಬಾಳುವುದು ಹಿಂದಿನಿಂದಲೂ ಇದೆ’ ಎಂದರು.</p>.<p>‘ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯವರು ವಿವಾದ ಸೃಷ್ಟಿಸುವಂತಹ ಸೂಕ್ಷ್ಮ ವಿಚಾರಗಳನ್ನೇ ತನ್ನ ಅಸ್ತ್ರವನ್ನಾಗಿ ಮಾಡಿಕೊಳ್ಳುತ್ತಿದ್ದಾರೆ. ಹಿಜಾಬ್, ಕೇಸರಿ ಶಾಲು, ಶಿವಮೊಗ್ಗದ ಹರ್ಷ ಹತ್ಯೆ ವಿಷಯದ ಬಳಿಕ ‘ದಿ ಕಾಶ್ಮೀರ್ ಫೈಲ್ಸ್ ’ ಚಲನಚಿತ್ರವನ್ನು ಇಟ್ಟುಕೊಂಡಿದ್ದಾರೆ. ಆ ಚಿತ್ರವೂ ಚುನಾವಣಾ ಪ್ರಚಾರದ ಒಂದು ಭಾಗವಾಗಿದೆ. ಒಂದಿಲ್ಲೊಂದು ವಿವಾದಾತ್ಮಕ ವಿಚಾರಗಳನ್ನು ಮುಂದಿಟ್ಟುಕೊಂಡು ಜನರ ಭಾವನೆಗಳೊಂದಿಗೆ ಚೆಲ್ಲಾಟವಾಡುತ್ತಿದೆ’ ಎಂದು ದೂರಿದರು.</p>.<p>‘ಆರು ತಿಂಗಳಲ್ಲಿ ಗುಜರಾತ್ ವಿಧಾನಸಭೆ ಚುನಾವಣೆ ನಡೆಯಲಿದ್ದು, ಅದರೊಂದಿಗೆ ಕರ್ನಾಟಕದ ವಿಧಾನಸಭೆ ಚುನಾವಣೆ ಸಾಧ್ಯತೆಗಳಿವೆ. ಈ ನಿಟ್ಟಿನಲ್ಲಿ ಬಿಜೆಪಿ ಸಮೀಕ್ಷೆಯನ್ನೂ ನಡೆಸುತ್ತಿದೆ. ಚುನಾವಣೆ ಎದುರಿಸಲು ಕಾಂಗ್ರೆಸ್ ಕೂಡ ಸಿದ್ಧವಾಗಿದೆ’ ಎಂದು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ದೇವಸ್ಥಾನಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ಹೇರಿರುವುದು ಬಿಜೆಪಿಯ ರಹಸ್ಯ ಕಾರ್ಯಸೂಚಿಯಾಗಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆರೋಪಿಸಿದರು.</p>.<p>ಇಲ್ಲಿ ಪತ್ರಕರ್ತರೊಂದಿಗೆ ಗುರುವಾರ ಮಾತನಾಡಿದ ಅವರು, ‘ನಮ್ಮದು ಜಾತ್ಯತೀತ ದೇಶ. ವಿವಿಧ ಜಾತಿ–ಧರ್ಮಗಳು ಕೂಡಿದೆ. ಎಲ್ಲರೊಂದಿಗೂ ಒಡನಾಟ ಇರುತ್ತದೆ. ಮುಸ್ಲಿಮರಿಗೆ ವ್ಯಾಪಾರವನ್ನು ಸಂಪೂರ್ಣವಾಗಿ ನಿರ್ಬಂಧಿಸುವುದು ಅಸಾಧ್ಯ. ಎಲ್ಲ ಸಮುದಾಯದವರೂ ಒಂದಾಗಿ ಬಾಳುವುದು ಹಿಂದಿನಿಂದಲೂ ಇದೆ’ ಎಂದರು.</p>.<p>‘ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯವರು ವಿವಾದ ಸೃಷ್ಟಿಸುವಂತಹ ಸೂಕ್ಷ್ಮ ವಿಚಾರಗಳನ್ನೇ ತನ್ನ ಅಸ್ತ್ರವನ್ನಾಗಿ ಮಾಡಿಕೊಳ್ಳುತ್ತಿದ್ದಾರೆ. ಹಿಜಾಬ್, ಕೇಸರಿ ಶಾಲು, ಶಿವಮೊಗ್ಗದ ಹರ್ಷ ಹತ್ಯೆ ವಿಷಯದ ಬಳಿಕ ‘ದಿ ಕಾಶ್ಮೀರ್ ಫೈಲ್ಸ್ ’ ಚಲನಚಿತ್ರವನ್ನು ಇಟ್ಟುಕೊಂಡಿದ್ದಾರೆ. ಆ ಚಿತ್ರವೂ ಚುನಾವಣಾ ಪ್ರಚಾರದ ಒಂದು ಭಾಗವಾಗಿದೆ. ಒಂದಿಲ್ಲೊಂದು ವಿವಾದಾತ್ಮಕ ವಿಚಾರಗಳನ್ನು ಮುಂದಿಟ್ಟುಕೊಂಡು ಜನರ ಭಾವನೆಗಳೊಂದಿಗೆ ಚೆಲ್ಲಾಟವಾಡುತ್ತಿದೆ’ ಎಂದು ದೂರಿದರು.</p>.<p>‘ಆರು ತಿಂಗಳಲ್ಲಿ ಗುಜರಾತ್ ವಿಧಾನಸಭೆ ಚುನಾವಣೆ ನಡೆಯಲಿದ್ದು, ಅದರೊಂದಿಗೆ ಕರ್ನಾಟಕದ ವಿಧಾನಸಭೆ ಚುನಾವಣೆ ಸಾಧ್ಯತೆಗಳಿವೆ. ಈ ನಿಟ್ಟಿನಲ್ಲಿ ಬಿಜೆಪಿ ಸಮೀಕ್ಷೆಯನ್ನೂ ನಡೆಸುತ್ತಿದೆ. ಚುನಾವಣೆ ಎದುರಿಸಲು ಕಾಂಗ್ರೆಸ್ ಕೂಡ ಸಿದ್ಧವಾಗಿದೆ’ ಎಂದು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>