ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಟಿಸಿಎಲ್‌ ಕಾಯ್ದೆ ಸಮಗ್ರ ತಿದ್ದುಪಡಿಗೆ ಆಗ್ರಹ: ಅಹೋರಾತ್ರಿ ಹೋರಾಟಕ್ಕೆ ನಿರ್ಧಾರ

ಸಭೆ ನಡೆಸಿದ ಭೂ ವಂಚಿತರ ಹೋರಾಟ ಸಮಿತಿ
Last Updated 11 ಆಗಸ್ಟ್ 2022, 4:27 IST
ಅಕ್ಷರ ಗಾತ್ರ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಭೂಮಿ ಪರಭಾರೆ ನಿಷೇಧ (ಪಿಟಿಸಿಎಲ್) ಕಾಯ್ದೆ ಸಮಗ್ರ ತಿದ್ದುಪಡಿ ಬಗ್ಗೆ ಮುಂದಿನ ಅಧಿವೇಶನದ ವೇಳೆಗೆ ಸರ್ಕಾರ ಸ್ಪಷ್ಟ ನಿರ್ಧಾರ ಪ್ರಕಟಿಸದಿದ್ದರೆ ಅಹೋರಾತ್ರಿ ಹೋರಾಟ ನಡೆಸಲು ದಲಿತ ಮುಖಂಡರು ನಿರ್ಧರಿಸಿದ್ದಾರೆ.

ಭೂ ವಂಚಿತರ ಹೋರಾಟ ಸಮಿತಿ ಬುಧವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.

ಪ್ರಜಾ ಪರಿವರ್ತನಾ ವೇದಿಕೆಯ ಅಧ್ಯಕ್ಷ ಬಿ.ಗೋಪಾಲ್ ಮಾತನಾಡಿ, ‘ವಿಧಾನ ಮಂಡಲ ಅಧಿವೇಶನ ಪ್ರಾರಂಭವಾಗುವ ಮುನ್ನ ಕಾಯ್ದೆ ತಿದ್ದುಪಡಿ ಕುರಿತು ರಾಜ್ಯ ಸರ್ಕಾರ ಸರಿಯಾದ ನಿರ್ಧಾರ ಕೈಗೊಳ್ಳಬೇಕು. ನಿರ್ಲಕ್ಷ್ಯ ವಹಿಸಿದರೆ ನಿರಂತರ ಹೋರಾಟ ನಡೆಸಬೇಕಾಗುತ್ತದೆ’ ಎಂದು ಎಚ್ಚರಿಸಿದರು.

ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ್ ಸ್ವಾಮೀಜಿ ಮಾತನಾಡಿ, ‘ಪಿಟಿಸಿಎಲ್ ಕಾಯ್ದೆ ತಿದ್ದುಪಡಿ ಅನುಷ್ಠಾನದ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಳ್ಳಲು ಇದೇ 18ರಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ 51 ಶಾಸಕರ ಸಭೆ ಕರೆಯಲಾಗಿದೆ. ಸಭೆಯಲ್ಲಿ ವ್ಯಕ್ತವಾಗುವ ಅಭಿಪ್ರಾಯ ಆಧರಿಸಿ 19ರಂದು ದಲಿತ ಮುಖಂಡರ ಸಭೆ ನಡೆಸುವುದು ಸೂಕ್ತ’ ಎಂದರು.

ಪಿಟಿಸಿಎಲ್ ತಿದ್ದುಪಡಿ ಕಾಯ್ದೆ ಅನುಷ್ಠಾನಕ್ಕೆ ಸಂಘ ಪರಿವಾರ ಅವಕಾಶ ನೀಡುತ್ತಿಲ್ಲ. ದಲಿತ ಸಮುದಾಯದವರು ಒಟ್ಟಾಗಿ ದೊಡ್ಡಮಟ್ಟದಲ್ಲಿ ಹೋರಾಟ ನಡೆಸಬೇಕಿದೆ ಎಂದು ಹೇಳಿದರು.

ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ರಾಜ್ಯ ಘಟಕದ ಅಧ್ಯಕ್ಷ ಎಂ ವೆಂಕಟಸ್ವಾಮಿ, ‘ಪಿಟಿಸಿಎಲ್ ಕಾಯ್ದೆ ತಿದ್ದುಪಡಿಗೆ ಮುಖ್ಯಮಂತ್ರಿ ಸಿದ್ಧವಿದ್ದರೂ ಕಂದಾಯ ಸಚಿವ ಆರ್.ಅಶೋಕ ಅಡ್ಡಿಪಡಿಸುತ್ತಿದ್ದಾರೆ. ಶಾಸಕರಾದ ಎಂ.ಪಿ.ಕುಮಾರಸ್ವಾಮಿ ಮತ್ತು ಎನ್.ಮಹೇಶ್ ಅವರು ಪ್ರಾಮಾಣಿಕವಾಗಿ ಬೆಂಬಲ ವ್ಯಕ್ತಪಡಿಸಿದ್ದಾರೆ’ ಎಂದರು. ಮುಖಂಡರಾದ ಮಾವಳ್ಳಿ ಶಂಕರ್, ಹೆಣ್ಣೂರು ಶ್ರೀನಿವಾಸ್ ಮಾತನಾಡಿದರು.

ದಲಿತ ಸಂಘರ್ಷ ಸಮಿತಿಯ (ಅಂಬೇಡ್ಕರ್ ವಾದ) ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್, ಹೆಣ್ಣೂರು ಶ್ರೀನಿವಾಸ್ ಮಾತನಾಡಿದರು.‌ ಅನಂತ ನಾಯಕ್, ನರಸಿಂಹ ನಾಯಕ್, ಎಂ.ಎಚ್. ಮಂಜುನಾಥ್, ಈಶ್ವರ್ ಬಳ್ಳಾರಿ, ಶಾಂತಕುಮಾರ್ ಚಳ್ಳಕೆರೆ, ತುಮಕೂರಿನ ದಾಸಪ್ಪಸಭೆಯಲ್ಲಿಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT