ಬೆಂಗಳೂರು: 2020–21ನೇ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಶೇ 99.9 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶವನ್ನು ಸೋಮವಾರ ಪ್ರಕಟಿಸಿದರು.
ಇತ್ತೀಚೆಗೆ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹಾಜರಾಗಿದ್ದ 8,71,443 ವಿದ್ಯಾರ್ಥಿಗಳಲ್ಲಿ ಒಬ್ಬ ವಿದ್ಯಾರ್ಥಿ ಹೊರತುಪಡಿಸಿ ಉಳಿದೆಲ್ಲರೂ ತೇರ್ಗಡೆಯಾಗಿದ್ದಾರೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಘೋಷಿಸಿದರು.
ಜುಲೈ 19 ಮತ್ತು 22ಕ್ಕೆ ಪರೀಕ್ಷೆ ನಡೆದಿದ್ದು, 8.76 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ವಿದ್ಯಾರ್ಥಿಗಳು http://sslc.karnataka.gov.in/ ವೆಬ್ಸೈಟ್ನಲ್ಲಿ ಫಲಿತಾಂಶ ನೋಡಬಹುದು.
ಒಬ್ಬ ವಿದ್ಯಾರ್ಥಿ ತನ್ನ ಬದಲಿಗೆ ಬೇರೆಯವರನ್ನು ಕಳುಹಿಸಿ ಪರೀಕ್ಷೆ ಬರೆಸಿದ್ದರಿಂದ ಆ ವಿದ್ಯಾರ್ಥಿಯನ್ನು ಅನುತ್ತೀರ್ಣಗೊಳಿಸಲಾಗಿದೆ.
ಫಲಿತಾಂಶದಲ್ಲಿ ಎ + ಶ್ರೇಣಿಯಲ್ಲಿ1,28,931 (ಶೇ.16.25) ವಿದ್ಯಾರ್ಥಿಗಳು, ಎ ಶ್ರೇಣಿಯಲ್ಲಿ 2,50,317(ಶೇ 32)ವಿದ್ಯಾರ್ಥಿಗಳು, ಬಿ ಶ್ರೇಣಿಯಲ್ಲಿ 2,87,684(ಶೇ.36.86) ವಿದ್ಯಾರ್ಥಿಗಳು, ಸಿ ಶ್ರೇಣಿಯಲ್ಲಿ 1,13,610(ಶೇ.14.55) ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
* ಎ + ಶ್ರೇಣಿಯಲ್ಲಿ 1,28,931 (ಶೇ.16.25) ವಿದ್ಯಾರ್ಥಿಗಳು * ಎ ಶ್ರೇಣಿಯಲ್ಲಿ 2,50,317 (ಶೇ 32) ವಿದ್ಯಾರ್ಥಿಗಳು * ಬಿ ಶ್ರೇಣಿಯಲ್ಲಿ 2,87,684 (ಶೇ.36.86) ವಿದ್ಯಾರ್ಥಿಗಳು * ಸಿ ಶ್ರೇಣಿಯಲ್ಲಿ 1,13,610 (ಶೇ.14.55) ವಿದ್ಯಾರ್ಥಿಗಳು