ಬೆಂಗಳೂರು: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ಸಿಂಗ್ ಅವರು ಇದೇ 19 ಕ್ಕೆ ನಗರಕ್ಕೆ ಬರಲಿದ್ದು,ಮಾ. 20 ರಂದು ಪಕ್ಷದ ಪ್ರಮುಖ ನಾಯಕರ ಸಭೆ ನಡೆಯಲಿದೆ.
ಈ ಸಭೆಯಲ್ಲಿ ಮೂರು ಕ್ಷೇತ್ರಗಳಿಗೆ ನಡೆಯುವ ಉಪಚುನಾವಣೆಯ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆಯಲಿದ್ದು, ರಾಜ್ಯದಲ್ಲಿ ಪಕ್ಷದ ವಿದ್ಯಮಾನಗಳ ಬಗ್ಗೆ ಮಾಹಿತಿ ಪಡೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಾ.19 ರಂದು ಸಂಜೆ 6 ಗಂಟೆಗೆ ಬರುವ ಅವರು ಕುಮಾರಕೃಪಾ ಅತಿಥಿಗೃಹದಲ್ಲಿ ವಾಸ್ತವ್ಯ ಹೂಡಲಿದ್ದು, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಮಾರ್ಚ್20ರ ಬೆಳಿಗ್ಗೆ 8.30ಕ್ಕೆ ಪ್ರಮುಖ ನಾಯಕರ ಸಭೆ ನಡೆಯಲಿದೆ.