<p><strong>ಬೆಂಗಳೂರು:</strong> ‘ಪ್ರಸಕ್ತ ಸಾಲಿನ (2022-23 ) ಬಜೆಟ್ನಲ್ಲಿ ಅಬಕಾರಿ ಇಲಾಖೆಗೆ ಹೊಸ ಸ್ವರೂಪ ನೀಡಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.</p>.<p>ಬಜೆಟ್ ಸಿದ್ಧತೆಗೆ ಪೂರ್ವಭಾವಿಯಾಗಿ ಇಲಾಖಾವಾರು ಸಭೆ ನಡೆಸಿದ ಅವರು, ‘ಅಬಕಾರಿ ಉದ್ಯಮ ವ್ಯಾಪ್ತಿ ಹೆಚ್ಚಿಸಿಕೊಂಡಿದೆ. ಯಾವುದೇ ಉದ್ಯಮ ವ್ಯಾಪ್ತಿ ಹೆಚ್ಚಿಸಿಕೊಂಡಾಗ ಬದಲಾವಣೆ ಆಗಲು ಸಮಯ ಬೇಕಾಗುತ್ತದೆ’ ಎಂದರು.</p>.<p>‘ರಾಜ್ಯದಲ್ಲಿ ನಕಲಿ ಮದ್ಯ ತಯಾರಿ ಮತ್ತು ಹೊರರಾಜ್ಯದಿಂದ ಬರುವ ನಕಲಿ ಮದ್ಯ ತಡೆಗೆ ಈಗಾಗಲೇ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಇದರಿಂದ ಸರ್ಕಾರಕ್ಕೆ ಆದಾಯ ಕೂಡ ಬರುತ್ತದೆ. ನಕಲಿ ಜಾಲದ ಹಿಂದೆ ಯಾರೇ ಭಾಗಿಯಾದರೂ ಮುಲಾಜಿಲ್ಲದೆ ಅಮಾನತು ಮಾಡುವಂತೆ ಆಯುಕ್ತರಿಗೆ ಸೂಚಿಸಿದ್ದೇನೆ’ ಎಂದರು.</p>.<p>‘ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿರುವ ಕಿರುಕುಳ ತಪ್ಪಿಸಲು ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ, ಒಟ್ಟು ವ್ಯವಸ್ಥೆಯಲ್ಲಿ ಬದಲಾವಣೆ ತರಲು ಇಲಾಖೆಗೆ ಹೊಸ ಸ್ವರೂಪ ನೀಡಲಾಗುವುದು. ಆರ್ಥಿಕ ಮಿತಿಗಳನ್ನು ನೋಡಿಕೊಂಡು ನೌಕರರಿಗೆ ಸೌಲಭ್ಯ ನೀಡಲಾಗುವುದು. ಅಲ್ಲದೆ, ಕಾನೂನುಗಳನ್ನು ಬದಲಾಯಿಸುವ ಬಗ್ಗೆಯೂ ಗಮನಹರಿಸಲಾಗುವುದು’ ಎಂದರು.</p>.<p>‘ಸಿಎಲ್ –7, ಸಿಎಲ್– 9 ವಿಚಾರದಲ್ಲಿ ಸಾಕಷ್ಟು ದೂರುಗಳು ಬಂದಿವೆ. ಅದೆಲ್ಲವನ್ನೂ ಸರಿಪಡಿಸುವ ಕೆಲಸ ಆಗಬೇಕು. ವ್ಯಾಪಾರ, ಆದಾಯ ಮೂರು ಮುಖ್ಯ ಅಂಶಗಳನ್ನು ಇಟ್ಟುಕೊಂಡು ಕೆಲಸ ಮಾಡುವಂತೆಯೂ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದರು.</p>.<p><strong>‘ಮದ್ಯ ದರ ಹೆಚ್ಚಳ ಚಿಂತನೆ ಇಲ್ಲ’</strong></p>.<p><strong>ಬೆಂಗಳೂರು:</strong> ‘ರಾಜ್ಯದಲ್ಲಿ ಮದ್ಯದ ದರ ಹೆಚ್ಚಿಸುವ ಚಿಂತನೆ ಮಾಡಿಲ್ಲ’ ಎಂದು ಅಬಕಾರಿ ಸಚಿವ ಕೆ. ಗೋಪಾಲಯ್ಯ ಹೇಳಿದರು.</p>.<p>ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಬಜೆಟ್ ಪೂರ್ವಭಾವಿ ಸಭೆಯ ಬಳಿಕ ಮಾತನಾಡಿದ ಅವರು, ‘ಆರ್ಥಿಕ ಇಲಾಖೆಯ ಕಾರ್ಯದರ್ಶಿ ಮತ್ತು ಮುಖ್ಯಮಂತ್ರಿ ಜೊತೆ ಶುಕ್ರವಾರ (ಫೆ. 25) ಸಭೆ ನಡೆಯಲಿದೆ. ಈ ಸಭೆಯಲ್ಲಿ ಇಲಾಖೆಯ ಸ್ಥಿತಿಗತಿ ಬಗ್ಗೆ ಚರ್ಚಿಸಲಾಗುವುದು’ ಎಂದರು.</p>.<p>‘ಪ್ರಸಕ್ತ ವರ್ಷ ಈಗಾಗಲೇ ಇಲಾಖೆ ₹ 23,247 ಕೋಟಿ ತೆರಿಗೆ ಸಂಗ್ರಹಿಸಿದ್ದು, ಆರ್ಥಿಕ ವರ್ಷದ ಅಂತ್ಯಕ್ಕೆ ಇದು ₹ 25 ಸಾವಿರ ಕೋಟಿ ತಲುಪುವ ನಿರೀಕ್ಷೆಯಿದೆ’ ಎಂದರು.</p>.<p>‘ಇಲಾಖೆಯ ಆರ್ಥಿಕ ಪರಿಸ್ಥಿತಿಯನ್ನು ಪರಾಮರ್ಶಿಸಿದ ಬಳಿಕ ಕೆಲವು ಸಲಹೆ, ಸೂಚನೆಗಳನ್ನು ಮುಖ್ಯಮಂತ್ರಿ ನೀಡಿದ್ದಾರೆ. ಇಲಾಖೆಯ ಅಭಿವೃದ್ಧಿಗೂ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಪ್ರಸಕ್ತ ಸಾಲಿನ (2022-23 ) ಬಜೆಟ್ನಲ್ಲಿ ಅಬಕಾರಿ ಇಲಾಖೆಗೆ ಹೊಸ ಸ್ವರೂಪ ನೀಡಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.</p>.<p>ಬಜೆಟ್ ಸಿದ್ಧತೆಗೆ ಪೂರ್ವಭಾವಿಯಾಗಿ ಇಲಾಖಾವಾರು ಸಭೆ ನಡೆಸಿದ ಅವರು, ‘ಅಬಕಾರಿ ಉದ್ಯಮ ವ್ಯಾಪ್ತಿ ಹೆಚ್ಚಿಸಿಕೊಂಡಿದೆ. ಯಾವುದೇ ಉದ್ಯಮ ವ್ಯಾಪ್ತಿ ಹೆಚ್ಚಿಸಿಕೊಂಡಾಗ ಬದಲಾವಣೆ ಆಗಲು ಸಮಯ ಬೇಕಾಗುತ್ತದೆ’ ಎಂದರು.</p>.<p>‘ರಾಜ್ಯದಲ್ಲಿ ನಕಲಿ ಮದ್ಯ ತಯಾರಿ ಮತ್ತು ಹೊರರಾಜ್ಯದಿಂದ ಬರುವ ನಕಲಿ ಮದ್ಯ ತಡೆಗೆ ಈಗಾಗಲೇ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಇದರಿಂದ ಸರ್ಕಾರಕ್ಕೆ ಆದಾಯ ಕೂಡ ಬರುತ್ತದೆ. ನಕಲಿ ಜಾಲದ ಹಿಂದೆ ಯಾರೇ ಭಾಗಿಯಾದರೂ ಮುಲಾಜಿಲ್ಲದೆ ಅಮಾನತು ಮಾಡುವಂತೆ ಆಯುಕ್ತರಿಗೆ ಸೂಚಿಸಿದ್ದೇನೆ’ ಎಂದರು.</p>.<p>‘ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿರುವ ಕಿರುಕುಳ ತಪ್ಪಿಸಲು ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ, ಒಟ್ಟು ವ್ಯವಸ್ಥೆಯಲ್ಲಿ ಬದಲಾವಣೆ ತರಲು ಇಲಾಖೆಗೆ ಹೊಸ ಸ್ವರೂಪ ನೀಡಲಾಗುವುದು. ಆರ್ಥಿಕ ಮಿತಿಗಳನ್ನು ನೋಡಿಕೊಂಡು ನೌಕರರಿಗೆ ಸೌಲಭ್ಯ ನೀಡಲಾಗುವುದು. ಅಲ್ಲದೆ, ಕಾನೂನುಗಳನ್ನು ಬದಲಾಯಿಸುವ ಬಗ್ಗೆಯೂ ಗಮನಹರಿಸಲಾಗುವುದು’ ಎಂದರು.</p>.<p>‘ಸಿಎಲ್ –7, ಸಿಎಲ್– 9 ವಿಚಾರದಲ್ಲಿ ಸಾಕಷ್ಟು ದೂರುಗಳು ಬಂದಿವೆ. ಅದೆಲ್ಲವನ್ನೂ ಸರಿಪಡಿಸುವ ಕೆಲಸ ಆಗಬೇಕು. ವ್ಯಾಪಾರ, ಆದಾಯ ಮೂರು ಮುಖ್ಯ ಅಂಶಗಳನ್ನು ಇಟ್ಟುಕೊಂಡು ಕೆಲಸ ಮಾಡುವಂತೆಯೂ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದರು.</p>.<p><strong>‘ಮದ್ಯ ದರ ಹೆಚ್ಚಳ ಚಿಂತನೆ ಇಲ್ಲ’</strong></p>.<p><strong>ಬೆಂಗಳೂರು:</strong> ‘ರಾಜ್ಯದಲ್ಲಿ ಮದ್ಯದ ದರ ಹೆಚ್ಚಿಸುವ ಚಿಂತನೆ ಮಾಡಿಲ್ಲ’ ಎಂದು ಅಬಕಾರಿ ಸಚಿವ ಕೆ. ಗೋಪಾಲಯ್ಯ ಹೇಳಿದರು.</p>.<p>ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಬಜೆಟ್ ಪೂರ್ವಭಾವಿ ಸಭೆಯ ಬಳಿಕ ಮಾತನಾಡಿದ ಅವರು, ‘ಆರ್ಥಿಕ ಇಲಾಖೆಯ ಕಾರ್ಯದರ್ಶಿ ಮತ್ತು ಮುಖ್ಯಮಂತ್ರಿ ಜೊತೆ ಶುಕ್ರವಾರ (ಫೆ. 25) ಸಭೆ ನಡೆಯಲಿದೆ. ಈ ಸಭೆಯಲ್ಲಿ ಇಲಾಖೆಯ ಸ್ಥಿತಿಗತಿ ಬಗ್ಗೆ ಚರ್ಚಿಸಲಾಗುವುದು’ ಎಂದರು.</p>.<p>‘ಪ್ರಸಕ್ತ ವರ್ಷ ಈಗಾಗಲೇ ಇಲಾಖೆ ₹ 23,247 ಕೋಟಿ ತೆರಿಗೆ ಸಂಗ್ರಹಿಸಿದ್ದು, ಆರ್ಥಿಕ ವರ್ಷದ ಅಂತ್ಯಕ್ಕೆ ಇದು ₹ 25 ಸಾವಿರ ಕೋಟಿ ತಲುಪುವ ನಿರೀಕ್ಷೆಯಿದೆ’ ಎಂದರು.</p>.<p>‘ಇಲಾಖೆಯ ಆರ್ಥಿಕ ಪರಿಸ್ಥಿತಿಯನ್ನು ಪರಾಮರ್ಶಿಸಿದ ಬಳಿಕ ಕೆಲವು ಸಲಹೆ, ಸೂಚನೆಗಳನ್ನು ಮುಖ್ಯಮಂತ್ರಿ ನೀಡಿದ್ದಾರೆ. ಇಲಾಖೆಯ ಅಭಿವೃದ್ಧಿಗೂ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>