ಅಲ್ಲದೆ, ಮಾಧುಸ್ವಾಮಿ ಅವರಿಗೆ ವೈದ್ಯಕೀಯ ಶಿಕ್ಷಣ ಖಾತೆಯ ಬದಲು ಪ್ರವಾಸೋದ್ಯಮ ಖಾತೆ ಮತ್ತು ಪರಿಸರ ಖಾತೆ ನೀಡಲು ಮುಂದಾಗಿದ್ದಾರೆ ಆನಂದ್ ಸಿಂಗ್ ಅವರಿಂದ ವ್ರವಾಸೋದ್ಯಮ ಮತ್ತು ಪರಿಸರ ಖಾತೆಯನ್ನು ತೆಗೆದು ಅವರಿಗೆ ಮುಖ್ಯಮಂತ್ರಿ ಬಳಿ ಇದ್ದ ಮೂಲಸೌಕರ್ಯ ಮತ್ತು ಮಾಧುಸ್ವಾಮಿ ಬಳಿ ಇದ್ದ ಹಜ್ ಮತ್ತು ವಕ್ಫ್ ಖಾತೆ ನೀಡಲು ಬಯಸಿದ್ದಾರೆ ಎನ್ನಲಾಗಿದೆ, ಈ ಬಗ್ಗೆ ರಾಜ್ಯಪಾಲರಿಗೆ ಕಡತ ಕಳುಹಿಸಿದ್ದಾರೆ ಎಂದೂ ಮೂಲಗಳು ಹೇಳಿವೆ.