ಆರ್.ಆರ್.ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಕೂಡಾ ಸಚಿವ ಸ್ಥಾನದ ಆಕಾಂಕ್ಷಿ. ಅವರ ಜೊತೆ, ಸರ್ಕಾರ ರಚಿಸಲು ಕಾರಣರಾದ ಎಂಟಿಬಿ ನಾಗರಾಜ್ ಕೂಡಾ ಸಂಪುಟದಲ್ಲಿ ಸ್ಥಾನ ಸಿಗುವ ಕನಸು ಕಾಣುತ್ತಿದ್ದಾರೆ. ಹಿರಿಯ ಶಾಸಕ ಉಮೇಶ ಕತ್ತಿ, ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅವರೂ ಸಚಿವ ಸ್ಥಾನದ ಪ್ರಮುಖ ಆಕಾಂಕ್ಷಿಗಳು.