ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Karnataka Covid-19 Update: ಮೃತರ ಸಂಖ್ಯೆ ಮತ್ತೆ ಏರಿಕೆ

Last Updated 7 ಜೂನ್ 2021, 18:09 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಮೃತರ ಸಂಖ್ಯೆ ಅಲ್ಪ ಏರಿದ್ದು, ಸೋಮವಾರ 340 ಮಂದಿ ಸಾವಿಗೀಡಾಗಿದ್ದಾರೆ. ರಾಜ್ಯದಲ್ಲಿ ಕೋವಿಡ್‌ ಮರಣ ಪ್ರಮಾಣ ದರ ಶೇ 2.84 ಹಾಗೂ ಮೃತಪಟ್ಟವರ ಒಟ್ಟು ಸಂಖ್ಯೆ 31,920ಕ್ಕೆ ಮುಟ್ಟಿದೆ.

ಹಿಂದಿನ 24 ಗಂಟೆಗಳಲ್ಲಿ 11,958 ಮಂದಿಯಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದ್ದು, ಕೋವಿಡ್‌ ರೋಗಿಗಳ ಒಟ್ಟು ಸಂಖ್ಯೆ 27.07 ಲಕ್ಷಕ್ಕೆ ಏರಿಕೆಯಾಗಿದೆ. ಸೋಂಕು ದೃಢ ಪ್ರಮಾಣ ಶೇ 9.08ಕ್ಕೆ ಇಳಿದಿದೆ.

ಸೋಮವಾರ 27,299 ಮಂದಿಯಲ್ಲಿ ಕಾಯಿಲೆ ವಾಸಿಯಾಗಿದೆ. ಹೀಗಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ 2.38 ಲಕ್ಷಕ್ಕೆ ತಗ್ಗಿದೆ. ರಾಜ್ಯದಲ್ಲಿ ಇದುವರೆಗೆ ಒಟ್ಟು 24.36 ಲಕ್ಷ ಮಂದಿ ಗುಣಮುಖರಾಗಿದ್ದಾರೆ. ಕೋವಿಡ್‌ ಪರೀಕ್ಷೆಗಳ ಸಂಖ್ಯೆ ಮತ್ತೆ ಕಡಿಮೆಯಾಗಿದೆ. ಒಂದು ದಿನದಲ್ಲಿ 1.31ಲಕ್ಷ ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ.

ಯಾದಗಿರಿ ಬಿಟ್ಟು ಉಳಿದ ಎಲ್ಲಾ ಜಿಲ್ಲೆಗಳಲ್ಲೂ ಮರಣ ಪ್ರಕರಣಗಳು ವರದಿಯಾಗಿವೆ. ಬೆಂಗಳೂರಿನಲ್ಲಿ ಸಾವಿನ ಸಂಖ್ಯೆ 199 ರಷ್ಟಿದೆ . ಬೆಳಗಾವಿ (15), ಹಾಸನ ಮತ್ತು ಹಾವೇರಿ (ತಲಾ 10), ಮೈಸೂರು (17), ಬಳ್ಳಾರಿ (9), ಧಾರವಾಡ (8) ಹಾಗೂ ಶಿವಮೊಗ್ಗದಲ್ಲೂ (9) ಹೆಚ್ಚು ಜನ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT