‘ಈ ಕುರಿತು ನನ್ನ ಸ್ಪಷ್ಟ ಅಭಿಪ್ರಾಯವೆಂದರೆ, ತುಳಿತಕ್ಕೆ ಒಳಗಾದ ಸಮುದಾಯಗಳಿಗೆ ನ್ಯಾಯ ಒದಗಿಸಲು ಮೀಸಲಾತಿ ಕಲ್ಪಿಸಲಾಗಿದೆ. ಇದರ ಲಾಭ ಈ ಸಮುದಾಯಗಳ ಎಲ್ಲ ಸದಸ್ಯರಿಗೂ ಸಿಗಬೇಕು. ಒಂದೇ ವರ್ಗ ಎಂಬ ಕಾರಣಕ್ಕೆ ಹಣ್ಣುಗಳ ಬುಟ್ಟಿಯನ್ನು ಬಲಶಾಲಿ ಜಾತಿಗೆ ಮಾತ್ರ ನೀಡಲಾಗದು. ಇದರಿಂದ ಇತರ ಜಾತಿಗಳಿಗೆ ಅನ್ಯಾಯವಾಗುತ್ತದೆ ಎಂದು ಸುಪ್ರೀಂಕೋರ್ಟ್ ಹೇಳಿದೆ. ಇದರ ಅರ್ಥ ತುಳಿತಕ್ಕೆ ಒಳಗಾದ ಸಮುದಾಯದ ಎಲ್ಲ ಒಳ ಜಾತಿಗಳಿಗೂ ಇದರ ಲಾಭ ಸಿಗಬೇಕು ಎಂಬುದೇ ಆಗಿದೆ. ಈ ವಿಷಯವನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸುತ್ತೇನೆ’ ಎಂದು ‘ಪ್ರಜಾವಾಣಿ’ಗೆ ತಿಳಿಸಿದರು.