ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂದಿನ ಚುನಾವಣೆಯೇ ಕೊನೆಯ ಚುನಾವಣೆ: ಸಿದ್ದರಾಮಯ್ಯ

Last Updated 25 ಮಾರ್ಚ್ 2022, 9:45 IST
ಅಕ್ಷರ ಗಾತ್ರ

ಮೈಸೂರು: ‘ಮುಂದಿನ ಚುನಾವಣೆಯೇ ನನ್ನ ಕೊನೆಯ ಚುನಾವಣೆ.‌ ಮತ್ತೆ ಚುನಾವಣಾ ರಾಜಕಾರಣ ಮಾಡುವುದಿಲ್ಲ. ಆದರೆ, ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಕೊನೆಯ ಚುನಾವಣೆಯಲ್ಲಿ ಎಲ್ಲಿಂದ ಸ್ಪರ್ಧಿಸುತ್ತೀರಿ ಎಂದು ಶುಕ್ರವಾರ ಇಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ, ‘ವರುಣಾ, ಹುಣಸೂರು, ಚಾಮರಾಜಪೇಟೆ, ಬಾದಾಮಿ, ಕೋಲಾರ, ಹೆಬ್ಬಾಳ, ಕೊಪ್ಪಳ, ಚಾಮುಂಡೇಶ್ವರಿ... ಹೀಗೆ ವಿವಿಧೆಡೆ ಸ್ಪರ್ಧೆ ಮಾಡುವಂತೆ ಜನರು ಆಹ್ವಾನ ನೀಡುತ್ತಿದ್ದಾರೆ. ಎಲ್ಲಿಂದ ಸ್ಪರ್ಧಿಸಬೇಕು ಎಂದು ತೀರ್ಮಾನಿಸಿಲ್ಲ. ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇದ್ದು, ಮುಂದೆ ಸೂಕ್ತ ನಿರ್ಧಾರ ಕೈಗೊಳ್ಳುತ್ತೇನೆ’ ಎಂದು ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT