ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಫ್‌ಐ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಬಸವರಾಜ ಬೊಮ್ಮಾಯಿ

Last Updated 19 ಫೆಬ್ರುವರಿ 2021, 10:06 IST
ಅಕ್ಷರ ಗಾತ್ರ

ಬೆಂಗಳೂರು: ‘ಭಾರತದ ಅಸಲಿ ಶತ್ರುವಾಗಿರುವ ಆರೆಸ್ಸೆಸ್‌ ನಿರ್ಮೂಲನೆಗೆ ಪ್ರತಿ ಗಲ್ಲಿಗಳಲ್ಲೂ ವ್ಯಾಕ್ಸಿನ್‌ ನೀಡುತ್ತೇವೆ’ ಎಂದು ಮಂಗಳೂರಿನ ಉಲ್ಲಾಳದಲ್ಲಿ ಇತ್ತೀಚೆಗೆ ನಡೆದ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾದ ಸಮಾವೇಶದಲ್ಲಿ ಕೆಲವು ಮುಖಂಡರು ನೀಡಿದರೆನ್ನಲಾದ ಹೇಳಿಕೆಯನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ಖಂಡಿಸಿದ್ದು, ‘ಪಿಎಫ್‌ಐ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು’ ಎಂದು ತಿಳಿಸಿದರು.

ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಪಿಎಫ್‌ಐ ಮುಖಂಡರು ದೇಶವನ್ನು ಒಡೆಯುವ ಮಾತುಗಳನ್ನು ಆಡಿದ್ದಾರೆ. ಇದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ’ ಎಂದು ಹೇಳಿದರು.

ದೇಶ ಭಕ್ತ ಸಂಘಟನೆಯಾದ ಆರೆಸ್ಸೆಸ್‌ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ. ಅಯೋಧ್ಯೆ ರಾಮಮಂದಿರ ಸುಪ್ರೀಂಕೋರ್ಟ್‌ ಈಗಾಗಲೇ ಆದೇಶ ನೀಡಿದೆ. ಈ ಕುರಿತು ಪಿಎಫ್‌ಐ ಆಕ್ಷೇಪಾರ್ಹ ಮಾತುಗಳನ್ನು ಆಡಿದೆ. ಈ ಮೂಲಕ ಪಿಎಫ್‌ಐ ತನ್ನ ನಿಜವಾದ ಬಣ್ಣವನ್ನು ಪದೇ ಪದೇ ತೋರಿಸುತ್ತಲೇ ಬಂದಿದೆ. ದೇಶ ವಿರೋಧಿ ಹೇಳಿಕೆಗಳನ್ನು ನೀಡುತ್ತಿರುವ ಈ ಸಂಘಟನೆ ವಿರುದ್ಧ ಕ್ರಮ ತೆಗೆದುಕೊಳ್ಳಲು ಸ್ಥಳೀಯ ಪೊಲೀಸರಿಗೆ ಸೂಚಿಸುತ್ತೇನೆ ಎಂದು ಬೊಮ್ಮಾಯಿ ತಿಳಿಸಿದರು.

ಪಿಎಫ್‌ಐ ಹೇಳಿದ್ದೇನು:

‘ದೆಹಲಿಯ ಗದ್ದುಗೆಯಲ್ಲಿ ಕುಳಿತಿರುವ ಇಬ್ಬರು ಮಹಾನ್‌ ನಾಟಕಕಾರರಿಗೆ ಸ್ಪಷ್ಟ ಸಂದೇಶ ನೀಡಲು ನಾವು ಈ ಬೃಹತ್ ಸಮಾವೇಶ ನಡೆಸಿದ್ದೇವೆ. ಹಿಂದೆ ಮಾಧ್ಯಮಗಳು ನಮಗೆ ಪ್ರಚಾರ ನೀಡುತ್ತಿರಲಿಲ್ಲ. ಇಂದು ಪರಿಸ್ಥಿತಿ ಬದಲಾಗಿದೆ. ನಾವು ಯಾರು ಅಂತ ತಿರುಗಿ ನೋಡುವಂತಾಗಿದೆ. ಸಿಬಿಐ, ಇ.ಡಿ ಮತ್ತು ಇತರ ತನಿಖಾ ಸಂಸ್ಥೆಗಳು ಆರೆಸ್ಸೆಸ್‌ ಪ್ರೇರಿತ ಸುಪಾರಿ ಕಿಲ್ಲರ್‌ಗಳಂತೆ ವರ್ತಿಸುತ್ತಿವೆ. ಇವರಿಗೆ ಹೆದರುವ ಅಗತ್ಯವಿಲ್ಲ. ಕಾನೂನು ಮೂಲಕ ಇವರನ್ನು ಸದೆ ಬಡಿದು ಮುನ್ನುಗ್ಗಬೇಕು’ ಎಂದು ಸಭೆಯಲ್ಲಿ ಮುಖಂಡರು ಪ್ರತಿಪಾದಿಸಿದರು.

ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ಕೇಳಲು ಬಂದರೆ ಯಾವುದೇ ಮುಸ್ಲಿಮ್‌ ವ್ಯಕ್ತಿ ಒಂದು ರೂಪಾಯಿ ಕೊಡಬಾರದು. ಅಲ್ಲಿ ನಿರ್ಮಾಣವಾಗುವುದು ರಾಮಮಂದಿರವಲ್ಲ ಆರೆಸ್ಸೆಸ್ ಮಂದಿರಎಂದು ಹೇಳಿದ್ದರೆನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT