ಬೆಂಗಳೂರು: ‘ಭಾರತದ ಅಸಲಿ ಶತ್ರುವಾಗಿರುವ ಆರೆಸ್ಸೆಸ್ ನಿರ್ಮೂಲನೆಗೆ ಪ್ರತಿ ಗಲ್ಲಿಗಳಲ್ಲೂ ವ್ಯಾಕ್ಸಿನ್ ನೀಡುತ್ತೇವೆ’ ಎಂದು ಮಂಗಳೂರಿನ ಉಲ್ಲಾಳದಲ್ಲಿ ಇತ್ತೀಚೆಗೆ ನಡೆದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಸಮಾವೇಶದಲ್ಲಿ ಕೆಲವು ಮುಖಂಡರು ನೀಡಿದರೆನ್ನಲಾದ ಹೇಳಿಕೆಯನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ಖಂಡಿಸಿದ್ದು, ‘ಪಿಎಫ್ಐ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು’ ಎಂದು ತಿಳಿಸಿದರು.