‘ಅಲ್ಲದೆ, ರಾಜ್ಯ ಸರ್ಕಾರದ ಘೋಷಿಸಿದ ಹೊಸ ತಾಲ್ಲೂಕುಗಳಲ್ಲಿ ಕೆಲವು ಕಡೆ ಹೊಸ ತಾಲ್ಲೂಕುಗಳನ್ನು ಮಾತ್ರ ವಿಭಜಿಸಿದ್ದು, ಕೆಲವು ಕಡೆ ವಿಭಜಿಸಿಲ್ಲ. ಎಲ್ಲ ತಾಲ್ಲೂಕು, ಜಿಲ್ಲೆಗಳಲ್ಲಿ ಚುನಾವಣಾಧಿಕಾರಿಗಳು ಇನ್ನೂ ಚುನಾವಣಾ ಪ್ರಕ್ರಿಯೆ ಆರಂಭಿಸಿಲ್ಲ. ನಿವೃತ್ತ ಹಾಗೂ ಖಾಸಗಿ ವ್ಯಕ್ತಿಗಳಿಂದ ಚುನಾವಣೆ ನಡೆಸಲು ಕ್ರಮ ಕೈಗೊಳ್ಳಲಾಗಿದೆ. ಚುನಾವಣೆ ಸ್ಥಳ ಮತ್ತು ಚುನಾವಣಾ ಆಧಿಕಾರಿಗಳು ಯಾರೆಂದು ಗೊತ್ತಾಗದೆ ಗೊಂದಲ ಉಂಟಾಗಿದೆ. ಸಾಮಾನ್ಯ ಚುನಾವಣಾ ಪ್ರಕ್ರಿಯೆಯ ನಿಯಮಗಳನ್ನೂ ಅನುಸರಿಸಿಲ್ಲ. ಒಟ್ಟಿನಲ್ಲಿ ಇಡೀ ಚುನಾವಣಾ ಪ್ರಕ್ರಿಯೆ ಪಾರದರ್ಶಕವಾಗಿಲ್ಲ’ ಎಂಬ ಕಾರಣಕ್ಕೆ ಚುನಾವಣೆ ತಡೆಹಿಡಿಯಲಾಗಿದೆ ಎಂದು ಗೊತ್ತಾಗಿದೆ.