ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಮಗಳೂರು: ಸಾವಿನ ನಂತರ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ 22 ವರ್ಷದ ಯುವತಿ

Last Updated 14 ಫೆಬ್ರುವರಿ 2022, 8:08 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಕರ್ತವ್ಯದ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದ 22 ವರ್ಷದ ಸ್ಟಾಫ್‌ ನರ್ಸ್‌ ಟಿ.ಕೆ.ಗಾನವಿ ಅವರ ಅಂಗಾಂಗಳನ್ನು ಪೋಷಕರು ದಾನ ಮಾಡಿದ್ದಾರೆ.

ಈ ವಿಚಾರವಾಗಿ ಟ್ವೀಟ್‌ ಮಾಡಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌, ‘ಗಾನವಿ ಅವರು ಜೀವಂತವಾಗಿದ್ದಾಗ ರೋಗಿಗಳನ್ನು ಕಾಳಜಿಯಿಂದ ಆರೈಕೆ ಮಾಡಿದರು. ಮರಣದ ನಂತರ ಅವರು ತಮ್ಮ ಅಂಗಾಂಗಗಳನ್ನು ಉಡುಗೊರೆಯಾಗಿ ನೀಡಿದರು. ದುರಂತ ಸಾವಿನ ನಂತರ ತಮ್ಮ ಅಂಗಾಂಗಗಳನ್ನು ದಾನ ಮಾಡಿದ 22 ವರ್ಷದ ಸ್ಟಾಫ್ ನರ್ಸ್ ಟಿ.ಕೆ.ಗಾನವಿ ಅವರು ‘ಪರೋಪಕಾರಾರ್ಥಂ ಯೋ ಜೀವತಿ ಸ ಜೀವತಿ’(ಯಾರು ಬೇರೆಯವರಿಗೋಸ್ಕರ ಜೀವಿಸುತ್ತಾರೋ ಅವರು ಮಾತ್ರ ಬದುಕಿರುತ್ತಾರೆ)’ ಎಂದು ತಿಳಿಸಿದ್ದಾರೆ.

‘ಹೃದಯ ವಿದ್ರಾವಕ ದುರಂತದ ನಡುವೆಯೂ ಗಾನವಿ ಕುಟುಂಬದವರು ತೋರಿಸಿದ ದಯೆಗೆ ಹ್ಯಾಟ್ಸ್ ಆಫ್. ಅಂಗಾಂಗ ದಾನದ ಪ್ರತಿಜ್ಞೆ ಕೈಗೊಳ್ಳಲು ಗಾನವಿ ಅವರು ನಮಗೆಲ್ಲ ಸ್ಫೂರ್ತಿಯಾಗಿದ್ದಾರೆ. ಇನ್‌ಸ್ಟಿಟ್ಯೂಟ್ ಆಫ್ ಗ್ಯಾಸ್ಟ್ರೊ ಎಂಟರಾಲಜಿ ಮತ್ತು ಆರ್ಗನ್ ಟ್ರಾನ್ಸ್‌ಪ್ಲಾಂಟ್‌ನಲ್ಲಿ (IGOT) ಅಂಗ ದಾನ ಮಾಡಿದ ಮೊದಲ ಘಟನೆ ಇದಾಗಿದೆ’ ಎಂದು ಸುಧಾಕರ್‌ ಹೇಳಿದ್ದಾರೆ.

ಬಾಳೆಹೊನ್ನೂರಿನ ಗಾನವಿ ಅವರುಶಿವಮೊಗ್ಗದಲ್ಲಿ ದಾದಿಯಾಗಿ ಸೇವೆ ಸಲ್ಲಿಸುತ್ತಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT