ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಪಠ್ಯ ಪುಸ್ತಕದಲ್ಲಿ ಹಲವು ಬಾರಿ ಬದಲಾವಣೆಗಳಾಗಿವೆ. ಸಿದ್ದರಾಮಯ್ಯ ಕಾಲದಲ್ಲಿಯೂ ಹೀಗೆ ಆಗಿದೆ. ಆಗ ಅವರು ಪಠ್ಯ ಪುಸ್ತಕ ಪರಿಷ್ಕರಣೆ ಹಿಂದೆಗೆದುಕೊಂಡಿದ್ದರೇ? ಸುಮ್ಮನೆ ಗೊಂದಲ ಸೃಷ್ಟಿ ಮಾಡಬಾರದು. ನಾವು ಈ ಬಗ್ಗೆ ಮುಕ್ತವಾಗಿದ್ದೇವೆ. ತಪ್ಪುಗಳನ್ನು ಸರಿಪಡಿಸಿ ಮರುಮುದ್ರಣ ಮಾಡಲು ಸಿದ್ಧರಿದ್ದೇವೆ’ ಎಂದರು.