‘ಸುರಪುರ ನಾಯಕರು ರಾಜಕೀಯ ಚರಿತ್ರೆಯಂತೆಯೇ ಅವರು ಸಾಂಸ್ಕೃತಿಕ ಕ್ಷೇತ್ರಕ್ಕೂ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ. ಕೆರೆ, ಬಾವಿ, ದೇವಾಲಯ, ಅರಮನೆ, ಕೋಟೆ– ಕೊತ್ತಲುಗಳನ್ನು ಕಟ್ಟಿಸಿದ್ದಾರೆ. ಅನೇಕರಿಗೆ ಜಹಗೀರುಗಳನ್ನು ನೀಡಿದ್ದಾರೆ. ಅಲ್ಲದೆ, ಇವರ ಕುಲದೇವರಾದ ತಿರುಪತಿ ವೆಂಕಟರಮಣ ಮತ್ತು ಗೋಪಾಲಸ್ವಾಮಿಯ ನಿತ್ಯ ಪೂಜೆಗಾಗಿ ಹಾಗೂ ಉತ್ಸವಗಳಿಗಾಗಿ ಜಹಗೀರು, ಇನಾಮು ಭೂಮಿಯನ್ನು ನೀಡಿದ್ದಾರೆ. ಇವರ ಆಸ್ಥಾನದಲ್ಲಿ ಅನೇಕ ಕಲಾಕಾರರು, ಗಾಯಕರು, ಚಿತ್ರಕಾರರು, ಶಿಲ್ಪಿಗಳು, ಸಾಹಿತಿಗಳು, ಆಶ್ರಯಿತರಾಗಿದ್ದರು. ಅನೇಕ ಮೌಲ್ಯಯುತ ಸಾಹಿತ್ಯ ಕೃತಿಗಳು ಹೊರಬಂದಿವೆ. ಸರ್ವಧರ್ಮ ಸಹಿಷ್ಣುಗಳಾಗಿದ್ದರು’ ಎಂಬ ಭಾಗಕ್ಕೆ ಚಕ್ರತೀರ್ಥ ಸಮಿತಿ ಕತ್ತರಿ ಪ್ರಯೋಗಿಸಿದೆ.