‘ಬಸವಣ್ಣ ಬೋಧಿಸಿದ ತತ್ವವನ್ನು ಶಕ್ತಿ ವಿಶಿಷ್ಟಾದ್ವೈತ ಎನ್ನಲಾಗುತ್ತದೆ ಎಂದು ಉಲ್ಲೇಖಿಸಲಾಗಿದೆ. ದೈತ್ವ, ಅದ್ವೈತ, ಶಕ್ತಿ ವಿಶಿಷ್ಟಾದ್ವೈತದಂತಹ ಕ್ಲಿಷ್ಟ ಶಬ್ದ ಮತ್ತು ತತ್ವಗಳು 9ನೇ ತರಗತಿ ವಿದ್ಯಾರ್ಥಿಗಳಿಗೆ ಕಬ್ಬಿಣದ ಕಡಲೆಗಳೇ ಸರಿ. ಅದಕ್ಕಿಂತ ಅವರು ತಮ್ಮ ವಚನಗಳ ಮೂಲಕ ಸಾರಿದ ಸಾಮಾಜಿಕ ಸಂದೇಶಗಳಿಗೆ ಸೀಮಿತವಾಗಿಸಿದ್ದರೆ ಸಾಕಿತ್ತು. ಬಸವಣ್ಣನವರು ಶಕ್ತಿ ವಿಶಿಷ್ಟಾದ್ವೈತವನ್ನು ಬೋಧಿಸಲಿಲ್ಲ. ಅದನ್ನು ಆಚರಿಸಿದರು ಎಂದಿರಬೇಕಿತ್ತು’ ಎಂದು ಹೇಳಿದ್ದಾರೆ.