ಕುವೆಂಪು ಅವಮಾನಿಸಿ ನಮ್ಮ ತಲೆಗೆ ಕಟ್ಟಲು ಹೊರಟ ಕಾಂಗ್ರೆಸ್ ನಾಟಕ ಬಯಲು: ಬಿಜೆಪಿ

ಬೆಂಗಳೂರು: ರಾಷ್ಟ್ರಕವಿ ಕುವೆಂಪು ಅವರನ್ನು ಅವಮಾನಿಸಿ ನಮ್ಮ ತಲೆಗೆ ಕಟ್ಟಲು ಹೊರಟ ಕಾಂಗ್ರೆಸ್ ನಾಟಕ ಬಯಲಾಗಿದೆ ಎಂದು ಬಿಜೆಪಿ ಮಂಗಳವಾರ ಹೇಳಿದೆ.
ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿ ಕುವೆಂಪು ಅವರನ್ನು ಅವಮಾನಿಸಲಾಗಿದೆ ಎಂದು ಕಾಂಗ್ರೆಸ್ ದೂರಿತ್ತು. ಇದಕ್ಕೆ ಉತ್ತರವಾಗಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಕುವೆಂಪು ಕುರಿತು ಪಠ್ಯದಲ್ಲಿ ಉಲ್ಲೇಖಿಸಿರುವ ವಿಚಾರ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಬರಗೂರು ರಾಮಚಂದ್ರಪ್ಪ ನೇತೃತ್ವದ ಪಠ್ಯ ಪರಿಷ್ಕರಣಾ ಸಮಿತಿ ಮುದ್ರಿಸಿದ್ದು ಎಂದು ತಿರುಗೇಟು ನೀಡಿದೆ.
ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯಿಂದ ರೋಹಿತ್ ಚಕ್ರತೀರ್ಥ ವಜಾಕ್ಕೆ ಆಗ್ರಹ
‘ಅದೇ ಶಬ್ದ, ಅವೇ ವಾಕ್ಯ, ಅವೇ ಸಾಲು! ಅನೇಕರ ಪ್ರೋತ್ಸಾಹದಿಂದ ಇವರು ಮುಂದೆ ಪ್ರಖ್ಯಾತ ಕವಿ ಎನಿಸಿಕೊಂಡರು ಎಂದು ಕುವೆಂಪು ಅವರ ಕುರಿತು ಕಾಂಗ್ರೆಸ್ ಅವಧಿಯಲ್ಲಿ ಬರಗೂರು ನೇತೃತ್ವದ ಪಠ್ಯ ಪರಿಷ್ಕರಣಾ ಸಮಿತಿ ಮುದ್ರಿಸಿತ್ತು. ತಮ್ಮದೇ ಸರ್ಕಾರದ ಅವಧಿಯಲ್ಲಿ ತಾವೇ ನೇಮಿಸಿದ ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿ ಕುವೆಂಪು ಅವರನ್ನು ಶಬ್ದಗಳಲ್ಲಿ ಅವಮಾನಿಸಿತ್ತು. ಅದನ್ನೀಗ ಬಿಜೆಪಿ ತಲೆಗೆ ಕಟ್ಟುವ ವ್ಯರ್ಥ ಪ್ರಲಾಪದಲ್ಲಿ ಕಾಂಗ್ರೆಸ್ ತೊಡಗಿರುವುದು ಹಾಸ್ಯಾಸ್ಪದ. ಸಿದ್ದರಾಮಯ್ಯ ಕಾಲದಲ್ಲಿ ಆಗದ ಅವಮಾನ ಈಗ ಹೇಗೆ?’ ಎಂದು ಬಿಜೆಪಿ ಟ್ವೀಟ್ನಲ್ಲಿ ಉಲ್ಲೇಖಿಸಿದೆ.
ಓದಿ...ಕೈತಪ್ಪಿದ ಟಿಕೆಟ್: ಸೌಜನ್ಯದಿಂದ ವರ್ತಿಸುವಂತೆ ಬೆಂಬಲಿಗರಿಗೆ ವಿಜಯೇಂದ್ರ ಮನವಿ
‘ರಾಷ್ಟ್ರಕವಿ ಕುವೆಂಪು ಅವರಿಗೆ ಅವಮಾನ ಮಾಡಿದೆ ಎಂದು ಕಾಂಗ್ರೆಸ್ ಬೊಬ್ಬಿಡುತ್ತಿದೆ. ಕಾಂಗ್ರೆಸ್ ನೇಮಿಸಿದ ಬರಗೂರು ತಂಡ, ಕುವೆಂಪು ಅವರ ಎರಡು ಅತ್ಯುತ್ತಮ ಬರಹಗಳನ್ನು ಪಠ್ಯಗಳಿಂದ ಕೈಬಿಟ್ಟಿತ್ತು. ಹಾಗಾದರೆ ರಾಷ್ಟ್ರಕವಿ ಕುವೆಂಪು ಅವರಿಗೆ ಅವಮಾನ ಮಾಡಿದ್ದು ಯಾರು?’ ಎಂದು ಬಿಜೆಪಿ ಕೇಳಿದೆ.
ನಾಳೆ ಗೋಡ್ಸೆಯನ್ನೂ ಪಠ್ಯದಲ್ಲಿ ಸೇರಿಸಬೇಕು ಅಂದ್ರೆ?: ಸಿದ್ದರಾಮಯ್ಯ ಪ್ರಶ್ನೆ
‘ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನೇಮಿಸಿದ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿ ಕುವೆಂಪು ಅವರಿಗೆ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ‘ಶ್ರೀರಾಮಾಯಣದರ್ಶನಂ’ ಮಹಾಕಾವ್ಯವನ್ನು ಪಠ್ಯದಿಂದಲೇ ತೆಗೆದು ಹಾಕಿತ್ತು. ರಾಷ್ಟ್ರಕವಿ ಕುವೆಂಪು ಅವರಿಗೆ ಅವಮಾನ ಮಾಡಿದ್ದು ಕಾಂಗ್ರೆಸ್ ಎನ್ನುವುದರಲ್ಲಿ ಅನುಮಾನವಿದೆಯೇ? ಕಾಂಗ್ರೆಸ್ ಸರ್ಕಾರ ರಾಷ್ಟ್ರಕವಿ ಕುವೆಂಪು ಬರೆದ ‘ಅನಲೆ’ ಎಂಬ ನಾಟಕ, ‘ಅಜ್ಜಯ್ಯನ ಅಭ್ಯಂಜನ’ ಎಂಬ ಸುಂದರ ಲಲಿತ ಪ್ರಬಂಧ ಕೈಬಿಟ್ಟಿತ್ತು. ‘ಬಹುಮಾನ’ ಎಂಬ ಅರ್ಥಪೂರ್ಣ ಕವಿತೆ ಹಾಗೂ ‘ಬೊಮ್ಮನಹಳ್ಳಿಯ ಕಿಂದರಿಜೋಗಿ’ ಎಂಬ ಶಿಶು ಸಾಹಿತ್ಯವನ್ನು ನಮ್ಮ ಸರ್ಕಾರದ ಸೇರಿಸಿದೆ. ಕುವೆಂಪು ಅವರಿಗೆ ಅವಮಾನ ಮಾಡಿದ್ಯಾರು’ ಎಂದು ಬಿಜೆಪಿ ಪ್ರಶ್ನಿಸಿದೆ.
ಚಕ್ರತೀರ್ಥ ಸಮಿತಿಗೆ ಪಿಯು ಪಠ್ಯ ಪರಿಷ್ಕರಣೆ ಹೊಣೆ
‘ಕುವೆಂಪು ಅವರ ಜೊತೆಗೆ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧಿ ಅವರಿಗೂ ಕಾಂಗ್ರೆಸ್ ಅವಮಾನ ಮಾಡಿದೆ. ಹತ್ತನೇ ತರಗತಿಯ ಕನ್ನಡ ಪಠ್ಯಪುಸ್ತಕದಿಂದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಮಹಾತ್ಮಾ ಗಾಂಧಿ ಕುರಿತಾದ ಪಠ್ಯವನ್ನು ಕೈ ಬಿಟ್ಟಿದ್ದರು’ ಎಂದು ಬಿಜೆಪಿ ದೂರಿದೆ.
ಅದೇ ಶಬ್ದ, ಅವೇ ವಾಕ್ಯ, ಅವೇ ಸಾಲು!!!
"ಅನೇಕರ ಪ್ರೋತ್ಸಾಹದಿಂದ ಇವರು ಮುಂದೆ ಪ್ರಖ್ಯಾತ ಕವಿ ಎನಿಸಿಕೊಂಡರು" ಎಂದು ಕುವೆಂಪು ಅವರ ಕುರಿತು ಕಾಂಗ್ರೆಸ್ ಅವಧಿಯಲ್ಲಿ ಬರಗೂರು ನೇತೃತ್ವದ ಪಠ್ಯ ಪರಿಷ್ಕರಣಾ ಸಮಿತಿ ಮುದ್ರಿಸಿತ್ತು.
ಸಿದ್ದರಾಮಯ್ಯ ಕಾಲದಲ್ಲಿ ಆಗದ ಅವಮಾನ ಈಗ ಹೇಗೆ?#CONgressInsultedKuvempu
— BJP Karnataka (@BJP4Karnataka) May 24, 2022
ಕಾಂಗ್ರೆಸ್ ನಾಟಕ ಬಯಲಾಗಿದೆ.
ತಮ್ಮದೇ ಸರ್ಕಾರದ ಅವಧಿಯಲ್ಲಿ ತಾವೇ ನೇಮಿಸಿದ ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿ ಕುವೆಂಪು ಅವರನ್ನು ಶಬ್ದಗಳಲ್ಲಿ ಅವಮಾನಿಸಿತ್ತು.
ಅದನ್ನೀಗ ಬಿಜೆಪಿ ತಲೆಗೆ ಕಟ್ಟುವ ವ್ಯರ್ಥ ಪ್ರಲಾಪದಲ್ಲಿ @INCKarnataka ತೊಡಗಿರುವುದು ಹಾಸ್ಯಾಸ್ಪದ.#CONgressInsultedKuvempu
— BJP Karnataka (@BJP4Karnataka) May 24, 2022
ರಾಷ್ಟ್ರಕವಿ ಕುವೆಂಪು ಅವರಿಗೆ ಅವಮಾನ ಮಾಡಿದೆ ಎಂದು ಕಾಂಗ್ರೆಸ್ ಬೊಬ್ಬಿಡುತ್ತಿದೆ.
ಕಾಂಗ್ರೆಸ್ ನೇಮಿಸಿದ ಬರಗೂರು ತಂಡ, ಕುವೆಂಪು ಅವರ ಎರಡು ಅತ್ಯುತ್ತಮ ಬರಹಗಳನ್ನು ಪಠ್ಯಗಳಿಂದ ಕೈಬಿಟ್ಟಿತ್ತು.
ಹಾಗಾದರೆ ರಾಷ್ಟ್ರಕವಿ ಕುವೆಂಪು ಅವರಿಗೆ ಅವಮಾನ ಮಾಡಿದ್ದು ಯಾರು?#CONgressInsultedKuvempu
— BJP Karnataka (@BJP4Karnataka) May 24, 2022
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನೇಮಿಸಿದ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿ ಕುವೆಂಪು ಅವರಿಗೆ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ #ಶ್ರೀರಾಮಾಯಣದರ್ಶನಂ ಮಹಾಕಾವ್ಯವನ್ನು ಪಠ್ಯದಿಂದಲೇ ತೆಗೆದು ಹಾಕಿತ್ತು.
ರಾಷ್ಟ್ರಕವಿ ಕುವೆಂಪು ಅವರಿಗೆ ಅವಮಾನ ಮಾಡಿದ್ದು ಕಾಂಗ್ರೆಸ್ ಎನ್ನುವುದರಲ್ಲಿ ಅನುಮಾನವಿದೆಯೇ?#CONgressInsultedKuvempu
— BJP Karnataka (@BJP4Karnataka) May 24, 2022
ಕಾಂಗ್ರೆಸ್ ಸರ್ಕಾರ ರಾಷ್ಟ್ರಕವಿ ಕುವೆಂಪು ಬರೆದ ʼಅನಲೆʼ ಎಂಬ ನಾಟಕ, ʼಅಜ್ಜಯ್ಯನ ಅಭ್ಯಂಜನʼ ಎಂಬ ಸುಂದರ ಲಲಿತ ಪ್ರಬಂಧ ಕೈಬಿಟ್ಟಿತ್ತು.
ʼಬಹುಮಾನʼ ಎಂಬ ಅರ್ಥಪೂರ್ಣ ಕವಿತೆ ಹಾಗೂ ʼಬೊಮ್ಮನಹಳ್ಳಿಯ ಕಿಂದರಿಜೋಗಿʼ ಎಂಬ ಶಿಶು ಸಾಹಿತ್ಯವನ್ನು ನಮ್ಮ ಸರ್ಕಾರದ ಸೇರಿಸಿದೆ.
ಕುವೆಂಪು ಅವರಿಗೆ ಅವಮಾನ ಮಾಡಿದ್ಯಾರು?#CONgressInsultedKuvempu
— BJP Karnataka (@BJP4Karnataka) May 24, 2022
ಕುವೆಂಪು ಅವರ ಜೊತೆಗೆ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧಿ ಅವರಿಗೂ ಕಾಂಗ್ರೆಸ್ ಅವಮಾನ ಮಾಡಿದೆ.
ಹತ್ತನೇ ತರಗತಿಯ ಕನ್ನಡ ಪಠ್ಯಪುಸ್ತಕದಿಂದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಮಹಾತ್ಮಾ ಗಾಂಧಿ ಕುರಿತಾದ ಪಠ್ಯವನ್ನು ಕೈ ಬಿಟ್ಟಿದ್ದರು.#CONgressInsultedKuvempu
— BJP Karnataka (@BJP4Karnataka) May 24, 2022
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.