''ಕರ್ನಾಟಕ ರಾಜ್ಯದ ಒಂಬತ್ತನೆಯ ತರಗತಿಯ ದ್ವಿತೀಯ ಭಾಷಾ ಕನ್ನಡ ಪಠ್ಯಪುಸ್ತಕ 'ತಿಳಿ ಕನ್ನಡ'ಪಠ್ಯಪುಸ್ತಕ ರಚನಾ ಸಮಿತಿ ಅಧ್ಯಕ್ಷನಾಗಿ ನಾನು ಕಾರ್ಯನಿರ್ವಹಿಸಿದ್ದೆನು. ಈಗಲೂ ನನ್ನ ಅಧ್ಯಕ್ಷತೆಯಲ್ಲಿ ಅದೇ ಪಠ್ಯ ಮುಂದುವರಿದಿದೆ ಎಂದು ತಿಳಿದು ಬಂತು. ಕರ್ನಾಟಕದನಾಡು–ನುಡಿ–ಸಂಸ್ಕೃತಿಯ ಅಂತಃಸಾಕ್ಷಿಯಂತಿರುವ ಮಾನ್ಯ ಕುವೆಂಪು ಅವರನ್ನು ಈಗಿನ ಪಠ್ಯ ಪರಿಷ್ಕರಣಾ ಸಮಿತಿಯ ಅಧ್ಯಕ್ಷರು ಗೇಲಿ ಮಾಡಿದ್ದಕ್ಕೆ ಮನನೊಂದು ಮತ್ತು ಪ್ರತಿಭಟಿಸುತ್ತಾ, ನಾನು 'ತಿಳಿ ಕನ್ನಡ' ದ್ವಿತೀಯ ಭಾಷಾ ಕನ್ನಡ ಪಠ್ಯಪುಸ್ತಕ– ಒಂಬತ್ತನೆಯ ತರಗತಿಯ ಪಠ್ಯಪುಸ್ತಕ ರಚನಾ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುತ್ತೇನೆ. ಪಠ್ಯದಲ್ಲಿ ನನ್ನ ಹೆಸರು ಹಾಗೂ ನಾನು ಬರೆದ 'ಪಾಠ ಮಾಡುವ ಮುನ್ನ' ಪ್ರಸ್ತಾವನೆಯನ್ನು ಸೇರಿಸಬಾರದಾಗಿ ವಿನಮ್ರ ವಿನಂತಿ'' ಎಂದು ತಿಳಿಸಿದ್ದಾರೆ.