<p><strong>ಬೆಂಗಳೂರು:</strong> ಸಿ.ಡಿ. ವಿಚಾರದಲ್ಲಿ ನ್ಯಾಯಾಲಯದಿಂದ ಪ್ರತಿಬಂಧಕಾಜ್ಞೆ ತಂದಿರುವ ಸಚಿವರಿಗೆ ಪ್ರಶ್ನೆ ಕೇಳದಿರುವ ಕಾಂಗ್ರೆಸ್ ನಿಲುವು ವಿಧಾನ ಪರಿಷತ್ನಲ್ಲಿ ಗದ್ದಲಕ್ಕೆ ಕಾರಣವಾಗಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಬಾರದ ಕಾರಣ ಉಪ ಸಭಾಪತಿ ಎಂ.ಕೆ. ಪ್ರಾಣೇಶ್ ಪ್ರಶ್ನೋತ್ತರದ ನಡುವೆಯೇ ಹತ್ತು ನಿಮಿಷಗಳ ಕಾಲ ಕಲಾಪ ಮುಂದೂಡಿದ್ದಾರೆ.</p>.<p>ಮಂಗಳವಾರ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಪಿ.ಆರ್. ರಮೇಶ್ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರಿಗೆ ಪ್ರಶ್ನೆ ಕೇಳಬೇಕಿತ್ತು. ನೈತಿಕತೆಯ ಪ್ರಶ್ನೆ ಎತ್ತಿದ ರಮೇಶ್ ಪ್ರಶ್ನೆ ಕೇಳುವುದನ್ನು ಬಹಿಷ್ಕರಿಸಿದರು.</p>.<p>ಬಿಜೆಪಿ ಸದಸ್ಯರು ಉಪ ಪ್ರಶ್ನೆ ಕೇಳಲು ಅವಕಾಶ ಕೋರಿದರು. ಪೀಠದಲ್ಲಿದ್ದ ಉಪ ಸಭಾಪತಿ ಅವಕಾಶ ನೀಡಲು ಮುಂದಾದರು. ಕಾಂಗ್ರೆಸ್ ಬಿ.ಕೆ. ಹರಿಪ್ರಸಾದ್, ಎಂ. ನಾರಾಯಣಸ್ವಾಮಿ, ಕೆ. ಪ್ರತಾಪಚಂದ್ರ ಶೆಟ್ಟಿ, ಸಿ.ಎಂ. ಇಬ್ರಾಹಿಂ, ಶ್ರೀನಿವಾಸ ಮಾನೆ ಸೇರಿದಂತೆ ಕಾಂಗ್ರೆಸ್ ಸದಸ್ಯರು ವಿರೋಧಿಸಿದರು.</p>.<p>ಕಾಂಗ್ರೆಸ್, ಬಿಜೆಪಿ ಸದಸ್ಯರ ನಡುವೆ ತೀವ್ರ ವಾಕ್ಸಮರ ಆರಂಭವಾಯಿತು. ಗದ್ದಲದ ನಡುವೆಯೇ ಸಮಜಾಯಿಷಿ ನೀಡಲು ಯತ್ನಿಸಿದ ಸಚಿವ ಸೋಮಶೇಖರ್, 'ಸಿ.ಡಿ ಇದೆ ಎಂದು ನಾವು ನ್ಯಾಯಾಲಯಕ್ಕೆ ಹೋಗಿಲ್ಲ. ನಕಲಿ ಸಿ.ಡಿ ತಯಾರಿಸಿ ತೇಜೋವಧೆ ಮಾಡಬಹುದು ಎಂಬ ಕಾರಣಕ್ಕೆ ಪ್ರತಿಬಂಧಕಾಜ್ಞೆ ತಂದಿದ್ದೇವೆ' ಎಂದರು.</p>.<p>ಗದ್ದಲದ ನಡುವೆಯೇ ಉಪ ಸಭಾಪತಿ, ಬಿಜೆಪಿಯ ಸುನೀಲ್ ಸುಬ್ರಮಣಿ ಅವರಿಗೆ ಪ್ರಶ್ನೆ ಕೇಳಲು ಅವಕಾಶ ನೀಡಿದರು. ನಂತರ ಜೆಡಿಎಸ್ನ ಕೆ.ಟಿ. ಶ್ರೀಕಂಠೇಗೌಡ ಪ್ರಶ್ನೆ ಕೇಳಬೇಕಿತ್ತು.</p>.<p>ಗದ್ದಲ ಹೆಚ್ಚಾದ ಕಾರಣದಿಂದ ಹತ್ತು ನಿಮಿಷಗಳ ಕಾಲ ಸದನ ಮುಂದೂಡಿದ ಉಪ ಸಭಾಪತಿ, ಸಭಾ ನಾಯಕರು ಮತ್ತು ವಿರೋಧ ಪಕ್ಷದ ನಾಯಕರನ್ನು ಸಂಧಾನಕ್ಕಾಗಿ ತಮ್ಮ ಕೊಠಡಿಗೆ ಕರೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸಿ.ಡಿ. ವಿಚಾರದಲ್ಲಿ ನ್ಯಾಯಾಲಯದಿಂದ ಪ್ರತಿಬಂಧಕಾಜ್ಞೆ ತಂದಿರುವ ಸಚಿವರಿಗೆ ಪ್ರಶ್ನೆ ಕೇಳದಿರುವ ಕಾಂಗ್ರೆಸ್ ನಿಲುವು ವಿಧಾನ ಪರಿಷತ್ನಲ್ಲಿ ಗದ್ದಲಕ್ಕೆ ಕಾರಣವಾಗಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಬಾರದ ಕಾರಣ ಉಪ ಸಭಾಪತಿ ಎಂ.ಕೆ. ಪ್ರಾಣೇಶ್ ಪ್ರಶ್ನೋತ್ತರದ ನಡುವೆಯೇ ಹತ್ತು ನಿಮಿಷಗಳ ಕಾಲ ಕಲಾಪ ಮುಂದೂಡಿದ್ದಾರೆ.</p>.<p>ಮಂಗಳವಾರ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಪಿ.ಆರ್. ರಮೇಶ್ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರಿಗೆ ಪ್ರಶ್ನೆ ಕೇಳಬೇಕಿತ್ತು. ನೈತಿಕತೆಯ ಪ್ರಶ್ನೆ ಎತ್ತಿದ ರಮೇಶ್ ಪ್ರಶ್ನೆ ಕೇಳುವುದನ್ನು ಬಹಿಷ್ಕರಿಸಿದರು.</p>.<p>ಬಿಜೆಪಿ ಸದಸ್ಯರು ಉಪ ಪ್ರಶ್ನೆ ಕೇಳಲು ಅವಕಾಶ ಕೋರಿದರು. ಪೀಠದಲ್ಲಿದ್ದ ಉಪ ಸಭಾಪತಿ ಅವಕಾಶ ನೀಡಲು ಮುಂದಾದರು. ಕಾಂಗ್ರೆಸ್ ಬಿ.ಕೆ. ಹರಿಪ್ರಸಾದ್, ಎಂ. ನಾರಾಯಣಸ್ವಾಮಿ, ಕೆ. ಪ್ರತಾಪಚಂದ್ರ ಶೆಟ್ಟಿ, ಸಿ.ಎಂ. ಇಬ್ರಾಹಿಂ, ಶ್ರೀನಿವಾಸ ಮಾನೆ ಸೇರಿದಂತೆ ಕಾಂಗ್ರೆಸ್ ಸದಸ್ಯರು ವಿರೋಧಿಸಿದರು.</p>.<p>ಕಾಂಗ್ರೆಸ್, ಬಿಜೆಪಿ ಸದಸ್ಯರ ನಡುವೆ ತೀವ್ರ ವಾಕ್ಸಮರ ಆರಂಭವಾಯಿತು. ಗದ್ದಲದ ನಡುವೆಯೇ ಸಮಜಾಯಿಷಿ ನೀಡಲು ಯತ್ನಿಸಿದ ಸಚಿವ ಸೋಮಶೇಖರ್, 'ಸಿ.ಡಿ ಇದೆ ಎಂದು ನಾವು ನ್ಯಾಯಾಲಯಕ್ಕೆ ಹೋಗಿಲ್ಲ. ನಕಲಿ ಸಿ.ಡಿ ತಯಾರಿಸಿ ತೇಜೋವಧೆ ಮಾಡಬಹುದು ಎಂಬ ಕಾರಣಕ್ಕೆ ಪ್ರತಿಬಂಧಕಾಜ್ಞೆ ತಂದಿದ್ದೇವೆ' ಎಂದರು.</p>.<p>ಗದ್ದಲದ ನಡುವೆಯೇ ಉಪ ಸಭಾಪತಿ, ಬಿಜೆಪಿಯ ಸುನೀಲ್ ಸುಬ್ರಮಣಿ ಅವರಿಗೆ ಪ್ರಶ್ನೆ ಕೇಳಲು ಅವಕಾಶ ನೀಡಿದರು. ನಂತರ ಜೆಡಿಎಸ್ನ ಕೆ.ಟಿ. ಶ್ರೀಕಂಠೇಗೌಡ ಪ್ರಶ್ನೆ ಕೇಳಬೇಕಿತ್ತು.</p>.<p>ಗದ್ದಲ ಹೆಚ್ಚಾದ ಕಾರಣದಿಂದ ಹತ್ತು ನಿಮಿಷಗಳ ಕಾಲ ಸದನ ಮುಂದೂಡಿದ ಉಪ ಸಭಾಪತಿ, ಸಭಾ ನಾಯಕರು ಮತ್ತು ವಿರೋಧ ಪಕ್ಷದ ನಾಯಕರನ್ನು ಸಂಧಾನಕ್ಕಾಗಿ ತಮ್ಮ ಕೊಠಡಿಗೆ ಕರೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>