ಇಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಕಾಂಗ್ರೆಸ್ ನಾಯಕರು ಜೆಡಿಎಸ್ ಪಕ್ಷವು ಬಿಜೆಪಿಯ ಬಿ ಟೀಮ್ ಎಂದು 2018ರಿಂದಲೂ ಆರೋಪ ಮಾಡುತ್ತಾ ಬಂದಿದ್ದಾರೆ. ಕಾಂಗ್ರೆಸ್ನವರು ಹಾದಿಬೀದಿಯಲ್ಲಿ ಆ ರೀತಿ ಹೇಳುವ ಬದಲು ತಮ್ಮ ಕತ್ತಿಗೆ ಸ್ಲೇಟ್ ಹಾಕಿಕೊಂಡು ಓಡಾಡಲಿ. ಕಾಂಗ್ರೆಸ್ನ ನಡುವಳಿಕೆ ಬಗ್ಗೆ ತೀರ್ಮಾನವನ್ನು ನಾಡಿನ ಜನರಿಗೆ ಬಿಟ್ಟಿದ್ದೇನೆ’ ಎಂದರು.