ಹುಬ್ಬಳ್ಳಿ/ಬೆಳಗಾವಿ: ಹಣ ಹಂಚಿಕೆ ಆರೋಪ, ಮತದಾರರ ಮೇಲೆ ಪ್ರಭಾವ ಬೀರಲು ಯತ್ನಿಸಿದ ಮತಗಟ್ಟೆ ಅಧಿಕಾರಿಗಳು, ಮತಗಟ್ಟೆ ಪ್ರವೇಶಿಸಿದ ಶಾಸಕ ಹಾಗೂ ಅಧಿಕಾರಿಗಳೊಂದಿಗೆ ವಾಗ್ವಾದದಂತಹ ಘಟನೆಗಳು ವಿಧಾನಪರಿಷತ್ನ ಪಶ್ಚಿಮ ಶಿಕ್ಷಕರ ಕ್ಷೇತ್ರ, ವಾಯವ್ಯ ಪದವೀಧರರ ಹಾಗೂ ವಾಯವ್ಯ ಶಿಕ್ಷಕರ ಕ್ಷೇತ್ರದಲ್ಲಿ ಸೋಮವಾರ ನಡೆದಿವೆ. ಉಳಿದಂತೆ ಮತದಾನವು ಶಾಂತಿಯುತವಾಗಿತ್ತು.