ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

’ಇದ್ಯಾವ ಅಭಿವೃದ್ಧಿ, ಇದಾ ನಿಮ್ಮ ನೀತಿ‘: ಸರ್ಕಾರದ ವಿರುದ್ಧವೇ ಬಿಜೆಪಿ ಶಾಸಕ ಕಿಡಿ

Last Updated 16 ಡಿಸೆಂಬರ್ 2021, 21:47 IST
ಅಕ್ಷರ ಗಾತ್ರ

ಬೆಳಗಾವಿ (ಸುವರ್ಣ ವಿಧಾನಸೌಧ): ’ಇದ್ಯಾವ ಅಭಿವೃದ್ಧಿ, ಇದಾ ನಿಮ್ಮ ನೀತಿ‘ ಎಂದು ರಾಜ್ಯ ಸರ್ಕಾರದ ವಿರುದ್ಧವೇ ಬಿಜೆಪಿ ಸದಸ್ಯ ಸಿದ್ದು ಸವದಿ ವಿಧಾನಸಭೆಯಲ್ಲಿ ಗುರುವಾರ ಹರಿಹಾಯ್ದರು.

ಬನಹಟ್ಟಿಯ ಹಳೆಯಲ್ಲಮ್ಮ ದೇವಸ್ಥಾನಕ್ಕೆ ಮೂಲಸೌಕರ್ಯ ಒದಗಿಸುವ ಕಾಮಗಾರಿಗೆ ಸಂಬಂಧಿಸಿದಂತೆ ಪ್ರಶ್ನೋತ್ತರ ಅವಧಿಯಲ್ಲಿ ಸಿದ್ದು ಸವದಿ ಪ್ರಶ್ನೆ ಕೇಳಿದರು.’₹20 ಲಕ್ಷ ಮೊತ್ತದ ಕಾಮಗಾರಿ ಆರಂಭವಾಗಿ ಮೂರು ವರ್ಷವಾಗಿದ್ದು, ಕಾಮಗಾರಿ ಮುಗಿಸಲು ವಿಳಂಬ ಮಾಡಲಾಗುತ್ತಿದೆ. ಇದಾ ಅಭಿವೃದ್ಧಿ ನೀತಿ‘ ಎಂದೂ ಪ್ರಶ್ನಿಸಿದರು. ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌ ಪರವಾಗಿ ಉತ್ತರಿಸಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ, ’ಯೋಜನೆಯ ಸ್ವರೂಪ ಬದಲಿಸಿ ಎಂದು ಸಿದ್ದು ಸವದಿ ಅವರೇ ಪತ್ರ ನೀಡಿದ ಕಾರಣಕ್ಕೆ ಸ್ವರೂಪ ಬದಲಿಸಲಾಗಿದೆ. ಹಾಗಾಗಿ, ಸ್ವಲ್ಪ ವಿಳಂಬವಾಗಿದೆ‘ ಎಂದರು.

ನೀವೇ ಪತ್ರ ನೀಡಿದ್ದೀರಲ್ಲ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ’ನಾನು ಪತ್ರ ಕೊಟ್ಟಿಲ್ಲ. ಅಧಿಕಾರಿಗಳೇ ನನ್ನಿಂದ ಪತ್ರ ಬರೆಸಿಕೊಂಡರು‘ ಎಂದು ಸಿದ್ದು ಸವದಿ ಸಮಜಾಯಿಷಿ ನೀಡಿದರು. ಅದು ನೀವು ಪತ್ರ ಕೊಟ್ಟಂತೆಯೇ ಎಂದು ಕಾಗೇರಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT