ಯಕ್ಷಗಾನದ ಅರ್ಥಧಾರಿ ಹಾಗೂ ಪ್ರಸಂಗಕರ್ತರಾಗಿದ್ದ ಅವರು ಎರಡನೇ ಅವಧಿಗೆ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿದ್ದರು. ಕೋವಿಡ್–19ಲಾಕ್ಡೌನ್ ಅವಧಿಯಲ್ಲಿ ಹಿರಿಯ ಹಾಗೂ ಪ್ರಸಿದ್ಧ ಯಕ್ಷಗಾನ ಹಿರಿಯ ಕಲಾವಿದರ ಜೊತೆ ವರ್ಚುವಲ್ ರೂಪದಲ್ಲಿ ‘ಮಾತಿನ ಮಂಟಪ’ ಮಾತುಕತೆ ಕಾರ್ಯಕ್ರಮಆಯೋಜಿಸಿದ್ದರು. ಈ ಕಾರ್ಯಕ್ರಮದಡಿ 100ಕ್ಕೂ ಅಧಿಕ ಕಲಾವಿದರ ಬದುಕಿನ ಚಿತ್ರಣವನ್ನು ಕಟ್ಟಿಕೊಟ್ಟಿದ್ದರು. ‘ಮಾತಿನ ಮಂಟಪ’ ಕಾರ್ಯಕ್ರಮದ ಮೂಲಕ 70 ವರ್ಷ ಮೀರಿದ ಕಲಾವಿದ ಸಂದರ್ಶನವನ್ನು ವರ್ಚುವಲ್ ರೂಪದಲ್ಲಿ ಕಟ್ಟಿಕೊಟ್ಟಿದ್ದರು. ಈ ಸರಣಿಯಲ್ಲಿ 50ಕ್ಕೂ ಅಧಿಕ ಕಾರ್ಯಕ್ರಮಗಳನ್ನು ಅಕಾಡೆಮಿಯು ರೂಪಿಸಿತ್ತು. ಕಲಾವಿದರ ಸಾಧನೆ, ಚಿಂತನೆ ಹಾಗೂ ಅವರ ಕಲಾ ಬದುಕನ್ನು ಯಕ್ಷಗಾನದ ಅಭಿಮಾನಿಗಳಿಗೆ ತಿಳಿಸುವ ಈ ಕಾರ್ಯಕ್ರಮ ಸರಣಿಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.