ಹುಬ್ಬಳ್ಳಿ: ‘ಗಡಿ ವಿವಾದ ಕುರಿತು ಮಹಾರಾಷ್ಟ್ರ ಸರ್ಕಾರ ಅನಗತ್ಯ, ಸಮಂಜಸವಲ್ಲದ ಹಾಗೂ ಬೇಜವಾಬ್ದಾರಿಯ ಹೇಳಿಕೆಗಳನ್ನು ಕೊಡುವುದು, ನಿಲುವುಗಳನ್ನು ತಾಳುವುದು ಮಾಡುತ್ತಿದೆ. ಆದರೆ, ಈ ವಿಚಾರದಲ್ಲಿ ಕರ್ನಾಟಕದ ನಿಲುವು ಸ್ಪಷ್ಟವಾಗಿದೆ. ಯಥಾಸ್ಥಿತಿ ಇಲ್ಲವೇ ಮಹಾಜನ್ ವರದಿ ಎಂಬುದಕ್ಕೆ ಕರ್ನಾಟಕ ಬದ್ಧವಾಗಿದೆ. ಅದರಲ್ಲಿ ರಾಜಿಯಿಲ್ಲ’ ಎಂದು ಶಾಸಕ ಹಾಗೂ ಮಹಾರಾಷ್ಟ್ರ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಎಚ್.ಕೆ.ಪಾಟೀಲ ಸ್ಪಷ್ಟಪಡಿಸಿದರು.