ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಎಎಸ್‌ ಅಧಿಕಾರಿ ಪತಿ ಕೋವಿಡ್‌ನಿಂದ ಸಾವು

Last Updated 27 ಮೇ 2021, 21:48 IST
ಅಕ್ಷರ ಗಾತ್ರ

ಶಿವಮೊಗ್ಗ: ಮದುವೆಯ ನಂತರ ಪತ್ನಿಯನ್ನು ಓದಿಸಿ, ಅವರ ಕೆಎಎಸ್‌ ಕನಸಿಗೆ ನೀರೆರೆದಿದ್ದಪತಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ನಗರದ ಕಾಮಾಕ್ಷಿ ಬೀದಿಯ ಎಲ್‌.ಶ್ರೀನಿವಾಸ್‌ (45) ಮೃತಪಟ್ಟವರು.

ಇವರು ಅಕ್ಕನ ಮಗಳನ್ನೇ ಮದುವೆಯಾಗಿದ್ದರು. ತಮ್ಮ ಸಾಧುಶೆಟ್ಟಿ ಸಮಾಜದಲ್ಲಿ ಹೆಣ್ಣುಮಕ್ಕಳು ಓದುವುದಿಲ್ಲ ಎಂಬ ಆಪಾದನೆಯಿಂದ ಮುಕ್ತವಾಗಬೇಕು ಎಂದು ಪತ್ನಿ ಅಶ್ವಿನಿಗೆ ಓದಲು ಪ್ರೇರಣೆ ನೀಡಿದ್ದರು. ಪತಿಯ ನಿರೀಕ್ಷೆ ಹುಸಿಗೊಳಿಸದ ಅಶ್ವಿನಿ ಪದವಿ ನಂತರ ಕೆಎಎಸ್‌ ತೇರ್ಗಡೆಯಾಗಿದ್ದರು. ಪ್ರಸ್ತುತ ತುಮಕೂರಿನಲ್ಲಿ ಪ್ರೊಬೇಷನರಿ ಅಧಿಕಾರಿಯಾಗಿ ತರಬೇತಿ ಪಡೆಯುತ್ತಿದ್ದಾರೆ. ತಹಶೀಲ್ದಾರ್ ಹುದ್ದೆ ಪೂರ್ಣಪ್ರಮಾಣದಲ್ಲಿ ದೊರಕುವ ಮೊದಲೇ ಪತಿ ಶ್ರೀನಿವಾಸ್‌ ನಿಧನರಾಗಿದ್ದಾರೆ.

ಕೆಲವು ದಿನಗಳ ಹಿಂದೆ ಕೊರೊನಾ ಸೋಂಕಿಗೆ ಒಳಗಾಗಿದ್ದ ಶ್ರೀನಿವಾಸ್‌ ಚಿಕಿತ್ಸೆಗೆ ಸ್ಪಂದಿಸಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT