ಬೆಂಗಳೂರು: ಕರ್ನಾಟಕ ಆಡಳಿತ ಸೇವೆಯ (ಕೆಎಎಸ್) ಅಧಿಕಾರಿ ಯೊಬ್ಬರ ವರ್ಗಾವಣೆ ಆದೇಶ ರದ್ದುಪಡಿಸಿ, ಅವರು ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಹುದ್ದೆಯಲ್ಲೇ ಮುಂದುವರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅವರ ರಾಜಕೀಯ ಕಾರ್ಯದರ್ಶಿ ಎಂ.ರೇಣುಕಾಚಾರ್ಯ ಪತ್ರ ಬರೆದಿದ್ದಾರೆ. ಈ ಶಿಫಾರಸು ಪತ್ರದಲ್ಲಿ ಅವರು ತಪ್ಪು ಮಾಹಿತಿ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.